Connect with us

Dvgsuddi Kannada | online news portal | Kannada news online

ಒಂದು ವಾರಕ್ಕೆ ಆಗುವಷ್ಟು ತರಕಾರಿ ಒಮ್ಮೆಲೇ ತೆಗೆದುಕೊಂಡು ಹೋಗಿ, ಪ್ರತಿ ದಿನ  ಮಾರುಕಟ್ಟೆಗೆ ಬರಬೇಡಿ: ಡಿಸಿ

ಪ್ರಮುಖ ಸುದ್ದಿ

ಒಂದು ವಾರಕ್ಕೆ ಆಗುವಷ್ಟು ತರಕಾರಿ ಒಮ್ಮೆಲೇ ತೆಗೆದುಕೊಂಡು ಹೋಗಿ, ಪ್ರತಿ ದಿನ  ಮಾರುಕಟ್ಟೆಗೆ ಬರಬೇಡಿ: ಡಿಸಿ

ದಾವಣಗೆರೆ: ಒಂದು ವಾರಕ್ಕೆ ಆಗುವಷ್ಟು ತರಕಾರಿಯನ್ನು ಒಮ್ಮೆಲೇ ತೆಗೆದುಕೊಂಡು ಹೋಗಿ. ಪ್ರತಿ ದಿನ ಮಾರುಕಟ್ಟೆಗೆ ಬರಬೇಡಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲಾಸ್ಪತ್ರೆಯ  ಆಕ್ಸಿಜನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಒಂದು ವಾರಕ್ಕೆ ಆಗುವಷ್ಟು ತರಕಾರಿಯನ್ನು ಒಮ್ಮಲೇ ತೆಗೆದುಕೊಂಡು ಹೋಗುತ್ತಾರೆ. ಅದೇ ರೀತಿ ನಗರ ಪ್ರದೇಶದ ಜನರು ಕೂಡ ಒಂದು ವಾರಕ್ಕೆ ಆಗುವಷ್ಟು ತರಕಾರಿಯನ್ನು ಒಮ್ಮೆಲೇ ತೆಗೆದುಕೊಂಡು ಹೋಗಬೇಕು. ಪ್ರತಿದಿನ ಮಾರುಕಟ್ಟೆಗೆ ಬರಬೇಡಿ. ಇದರಿಂದ ಒಂದಿಷ್ಟು ಜನ ದಟ್ಟಣಿ ಕಡಿಮೆಯಾಗಿ, ಕೊರೊನಾ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ  ಕೊರೊನಾ ಪರೀಕ್ಷೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಇದರಿಂದ ಹೆಚ್ಚು ಹೆಚ್ಚು ಕೇಸ್ ಗಳು ಬರುತ್ತಿವೆ. ನಿನ್ನೆ 4ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, 6 ಜನ ಸಾವನ್ನಪ್ಪಿದ್ದಾರೆ.  ಕೊರೊನಾ ಎಲ್ಲ ಕಡೆ ಹರಡಿದ್ದು, ಜನರು ಸ್ವಯಂ ನಿಯಂತ್ರಣ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಸಂದಸರು  ಚರ್ಚಿಸಿದ್ದು, ಕರ್ಫ್ಯೂ ಸಡಿಲವಾಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪೊಲೀಸರು ಸಹ ಎಲ್ಲ ಕಡೆ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top