Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೋಗುಂಡಿ ಬಕ್ಕೇಶಪ್ಪ, ಉಪಾಧ್ಯಕ್ಷರಾಗಿ ಕುಮಾರ್‌ ಅವಿರೋಧ ಆಯ್ಕೆ

IMG 20240208 154508

ದಾವಣಗೆರೆ

ದಾವಣಗೆರೆ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೋಗುಂಡಿ ಬಕ್ಕೇಶಪ್ಪ, ಉಪಾಧ್ಯಕ್ಷರಾಗಿ ಕುಮಾರ್‌ ಅವಿರೋಧ ಆಯ್ಕೆ

ದಾವಣಗೆರೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ದಾವಣಗೆರೆ ‘ಸಿ’ ವರ್ಗದಿಂದ ಆಯ್ಕೆಯಾದ ಕೋಗುಂಡಿ ಬಕ್ಕೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಹರಿಹರ ‘ಎ’ವರ್ಗ ಡಿ.ಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಇಬ್ಬರು ಅಭ್ಯರ್ಥಿ ಹೊರತುಪಡಿಸಿ ಯಾರು‌ ಕೂಡ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.

15 ನಿರ್ದೇಶಕರ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್ ಪಕ್ಷ ಡಿಸಿಸಿ ಬ್ಯಾಂಕ್‌ ಅಧಿಕಾರಕ್ಕೇರಿದೆ‌. ಇದಕ್ಕೂ ಮೊದಲು ಬಿಜೆಪಿ ಅಧಿಕಾರದಲ್ಲಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top