Connect with us

Dvgsuddi Kannada | online news portal | Kannada news online

ದಾವಣಗೆರೆ: ತೆಂಗಿನ ಕಾಯಿ ಕೀಳಲು ಹೋದ ಯುವಕನಿಗೆ ವಿದ್ಯುತ್ ಶಾಕ್ ; ಲೈನ್‌ಗೆ ದೋಟಿ ತಗುಲಿ ಸಾವು

images 2024 04 12T151448.926

ದಾವಣಗೆರೆ

ದಾವಣಗೆರೆ: ತೆಂಗಿನ ಕಾಯಿ ಕೀಳಲು ಹೋದ ಯುವಕನಿಗೆ ವಿದ್ಯುತ್ ಶಾಕ್ ; ಲೈನ್‌ಗೆ ದೋಟಿ ತಗುಲಿ ಸಾವು

ದಾವಣಗೆರೆ: ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಕಾಯಿ ಕೇಳುವ ದೋಟಿ ವಿದ್ಯುತ್ ಲೈನ್‌ಗೆ ತಗುಲಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ‌

ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ವಿದ್ಯುತ್ ಲೈನ್‌ನಿಂದ ವಿದ್ಯುತ್ ಪ್ರವಹಿಸಿ ಯುವಕ ಹರೀಶ (32) ಮೃತ ದುರ್ದೈವಿ. ಹರೀಶ್‌ ಬೆಳಿಗ್ಗೆ ತಮ್ಮ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಕಾರ್ಬನ್‌ ದೋಟಿ ತೆಗೆದುಕೊಂಡು ಹೋಗಿದ್ದರು. ಈ ವೇಳೆ ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್‌ಗೆ ದೋಟಿ ತಗುಲಿದಾಗ ವಿದ್ಯುತ್ ಪ್ರವಹಿಸಿದೆ ಕೂಡಲೇ ಅವರನ್ನು ದಾವಣಗೆರೆ ಎಸ್‌ಎಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು‌ ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹರೀಶ್‌ ಮೃತಪಟ್ಟಿದ್ದಾನೆ.
ಮೃತ ತಂದೆ ರಂಗಪ್ಪ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top