ದಾವಣಗೆರೆ: ಕೃಷಿ ಹೊಂಡದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿ ಪತ್ನಿ ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿ ನಾಲ್ವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಾವಣಗೆರೆ ತಾಲ್ಲೂಕಿನ ಹುಲಿಕಟ್ಟೆ ಗ್ರಾಮದಲ್ಲಿ ಇತ್ತೀಚೆಗೆ ಕೃಷಿ ಹೊಂಡದಲ್ಲಿ ಮುಳುಗಿ ಕಲ್ಲೇಶ್ (33) ಮೃತಪಟ್ಟಿದ್ದರು. ತಮ್ಮ ಪತಿಗೆ ಈಜು ಬರುವುದಿಲ್ಲ ಎಂಬುದು ಗೊತ್ತಿದ್ದರೂ, ಕೊಲೆ ಮಾಡುವ ಉದ್ದೇಶದಿಂದ ಸ್ನೇಹಿತರು ಕೃಷಿ ಹೊಂಡಕ್ಕೆ ತಳ್ಳಿದ್ದಾರೆ.
ಆರೋಪಿಗಳಾದ ಶರತ್, ನವೀನ್, ಕೊಟ್ರೇಶ, ನವೀನ್ ಮಹೇಶ್ವರಪ್ಪ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಮೃತರ ಪತ್ನಿ ಅಶ್ವಿನಿ ದೂರು ನೀಡಿದ್ದರು.



