Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿಕ್ಷಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿಯದ್ದು ಆತ್ಮಹತ್ಯೆಯಲ್ಲ, ಸಹಜ ಸಾವು ಎಂದ ಪತಿ

death news 1

ದಾವಣಗೆರೆ

ದಾವಣಗೆರೆ: ಶಿಕ್ಷಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿಯದ್ದು ಆತ್ಮಹತ್ಯೆಯಲ್ಲ, ಸಹಜ ಸಾವು ಎಂದ ಪತಿ

ದಾವಣಗೆರೆ; ಹೊನ್ನಾಳಿ ಬಳಿ ತುಂಗಾಭದ್ರಾ ನದಿಯಲ್ಲಿ ಶಿಕ್ಷಕಿ ಅನುಮಾಸ್ಪದ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ನದಿಯಲ್ಲಿ ಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಗಾಗಿ ಸಾಲ ಮಾಡಿದ್ದು, ಫೈನಾನ್ಸ್‌ ಕಿರುಕುಳದಿಂದ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದ ಪತಿ ಹಾಲೇಶ್, ಈಗ ನದಿಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಶಿಕ್ಷಕಿಯ ಮೃತ ದೇಹ ಹೊನ್ನಾಳಿ ಪಟ್ಟಣದ ಪಂಪ್ ಹೌಸ್ ಬಳಿ ಇಂದು (ಜ.28) ಬೆಳಿಗ್ಗೆ ಪತ್ತೆಯಾಗಿದೆ. ಪತ್ನಿಯ ಸಾವು ಆಕಸ್ಮಿಕವಾಗಿ ಆಗಿದೆ. ಸಾವಿನ ಬಗ್ಗೆ ಬೇರೆ ಯಾವುದೇ ರೀತಿಯ ಅನುಮಾನ ಇಲ್ಲ ಎಂದಿದ್ದು, ಪ್ರಕರಣ ದಾಖಲಿಸಿಕೊಂಡ ಮಾಹಿತಿ ಆಧರಿಸಿ ಪೊಲೀಸ್ ವಿಚಾರಣೆ, ತನಿಖೆ ಮುಂದುವರಿದಿದೆ.

ಹಾವೇರಿ ಜಿಲ್ಲೆಯ ತುಮ್ಮಿನಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಮೃತಪಟ್ಟವರು. ಪತಿ ಸಹ ಚಿಕ್ಕೆರೂರಿನಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಇವರು ಹೊನ್ನಾಳಿ ಹೊಸ ಮನೆ ಸಹ ನಿರ್ಮಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top