Connect with us

Dvgsuddi Kannada | online news portal | Kannada news online

ದಾವಣಗೆರೆ: ಜೈಲಿಗೆ ಹೋಗಿ ಬಂದವನು ಎಂಬ ಮಾನಸಿಕ ಹಿಂಸೆ; ಯುವಕ ಆತ್ಮಹತ್ಯೆ

ದಾವಣಗೆರೆ

ದಾವಣಗೆರೆ: ಜೈಲಿಗೆ ಹೋಗಿ ಬಂದವನು ಎಂಬ ಮಾನಸಿಕ ಹಿಂಸೆ; ಯುವಕ ಆತ್ಮಹತ್ಯೆ

ದಾವಣಗೆರೆ: ಜೈಲಿಗೆ ಹೋಗಿ ಬಂದವನು ಎಂಬ ಗ್ರಾಮದ ಕೆಲವರು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲ್ಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ನಡೆದಿದೆ.

ಜೈಲಿಗೆ ಹೋದವನು ಎಂದು ಊರ ಜನ ಕಿರಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಪೋಕ್ಸೋ ಪ್ರಕರಣದ ಆರೋಪಿಯು 9. ಜನರ ಹೆಸರು ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೀರೇಶ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದಾನೆ.

ಆಟೋ ಚಾಲಕನಾಗಿದ್ದ ವೀರೇಶ್ 2020 ರಲ್ಲಿ ಅಪ್ರಾಪ್ತೆ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಹಿನ್ನಲೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದನು. ಆದರೆ , ಜೈಲಿಗೆ ಹೋಗಿ ಬಂದವನು, ಫೋಕ್ಸೊ ಪ್ರಕರಣ ಇದೆ ಎಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌ ಮಾನಸಿಕ ಕಿರುಕುಳ ನೀಡಿದ್ದರು ಎನ್ನಲಾದ 9 ಜನರ ಹೆಸರು ಬರೆದಿಟ್ಟಿದ್ದಾನೆ. ಈ ಸಂಬಂಧ ಹದಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top