ದಾವಣಗೆರೆ; ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸು ಹಾಗೂ ರೈಲಿನ ವ್ಯವಸ್ಥೆ ಕಲ್ಪಿಸಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್. ಅಂಬೇಡ್ಕರ್ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸುವ ಬಗ್ಗೆ ಸರ್ಕಾರದಿಂದ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಈ ಬಗ್ಗೆ ಆನ್ಲೈನ್ ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ http://swd.karnataka.gov.in ವೆಬ್ಸೈಟ್ನಲ್ಲಿ ದೀಕ್ಷಾಭೂಮಿ ಯಾತ್ರೆ ಸೆ.30 ರಿಂದ ಅ.4 ರವರೆಗೆ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಆಸಕ್ತಿವುಳ್ಳವರು ಈ ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು.
- ನಾಗಪುರ ದೀಕ್ಷಾ ಭೂಮಿ ಪ್ರವಾಸ
- ಡಾ. ಬಿ. ಆರ್. ಅಂಬೇಡ್ಕರ್ ಅನುಯಾಯಿಗಳಿಂದ ಅವಕಾಶ
- ಸೆ.15ರೊಳಗಾಗಿ ನೋಂದಾಯಿಸಿ
ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swd.karnataka.gov.in ನಲ್ಲಿ ಆನ್ಲೈನ್ ಮೂಲಕ ಸೆ.25 ರೊಳಗಾಗಿ ನೋಂದಾಯಿಸಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.



