Connect with us

Dvgsuddi Kannada | online news portal | Kannada news online

ದಾವಣಗೆರೆ: ದೀನ ದಯಾಳ್ ಅಂತ್ಯೋದಯ ಯೋಜನೆಯಡಿ ಸಾಲ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

images 2024 05 18T184409.214

ದಾವಣಗೆರೆ

ದಾವಣಗೆರೆ: ದೀನ ದಯಾಳ್ ಅಂತ್ಯೋದಯ ಯೋಜನೆಯಡಿ ಸಾಲ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪು ಉದ್ಯಮ ಕೈಗೊಳ್ಳಲು, ಎಸ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು, ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಕಾರ್ಯಕ್ರಮದಡಿ ವಿವಿಧ ತರಬೇತಿಯನ್ನು ಪಡೆಯಲು, ಮಹಿಳಾ ಸ್ವ ಸಹಾಯ ಸಂಘಗಳನ್ನು ರಚಿಸಲು, ವಿಕಲಚೇತನ ಪುರುಷರ ಸ್ವ ಸಹಾಯ ಸಂಘಗಳನ್ನು ರಚಿಸಲು, ಬೀದಿ ಬದಿ ವ್ಯಾಪಾರಿಗಳ ಸ್ವ ಸಹಾಯ ಸಂಘಗಳನ್ನು ರಚಿಸಲು ಆಸಕ್ತ ಅರ್ಹ ಫಲಾನುಭವಿಗಳಿಂದ, ಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಧಿತ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಜುಲೈ 12 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಫಲಾನುಭವಿಗಳು ಹರಿಹರ ನಗರದ ನಿವಾಸಿಗಳಾಗಿರಬೇಕು, ಬಡತನ ರೇಖೆ ಕೆಳಗಿನ ಕುಟುಂಬದವರಾಗಿರಬೇಕು ಹಾಗೂ ಅರ್ಜಿಯೊಂದಿಗೆ ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಹುಟ್ಟಿದ ತಾರೀಖು ದೃಢೀಕರಣ ಪತ್ರ ಲಗತ್ತಿಸಿ. ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬೇಕೆಂದು ನಗರಸಭೆ ಪೌರಾಯುಕ್ತ ಬಸವರಾಜ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top