ದಾವಣಗೆರೆ: ಧನ್ವಂತರಿ ಜಯಂತಿ; ಆಯುರ್ವೇದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕಿದೆ; ಸುರೇಶ್ ಬಿ. ಇಟ್ನಾಳ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಆಯುರ್ವೇದ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೇ ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯ ರಕ್ಷಣೆಯ ಕುರಿತು ಪ್ರತಿದಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ನಗರದ ಕುವೆಂಪು ಕನ್ನಡ ಭವನದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಸಭಾಂಗಣದಲ್ಲಿ ಆದಿದೇವ ಧನ್ವಂತರಿ ಜಯಂತಿ ಅಂಗವಾಗಿ ಜರುಗಿದ 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಆದಿದೇವ ಧನ್ವಂತರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಸಂಪೂರ್ಣ ಆರೋಗ್ಯ, ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯ ರಕ್ಷಣೆಯ ಆಯುರ್ವೇದ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ, ರೈತರಿಗೆ ಹಾಗೂ ಎಲ್ಲಾ ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿರಬೇಕು. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ಮತ್ತು ಮೆಡಿಟೇಷನ್ ಕುರಿತು ಜಾಗೃತಿ ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಜನರು ಯೋಗದಲ್ಲಿ ಆಸಕ್ತಿಯನ್ನು ಹೊಂದುತ್ತಿದ್ದಾರೆ, ಹೀಗಿದ್ದರೂ ಸಹ ಇತರೆ ಕೋರ್ಸ್‍ಗಳಿಗೆ ಇರುವ ಆದ್ಯತೆ ಆಯುರ್ವೇದ ಕೋರ್ಸ್‍ಗೆ ದೊರೆಯುತ್ತಿಲ್ಲ. ಆದ್ದರಿಂದ ಭವಿಷ್ಯದ ಪೀಳಿಗೆಗೆ ಆಯುರ್ವೇದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಶಂಕರಗೌಡ ಮಾತನಾಡಿ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಆದಿದೈವ ಧನ್ವಂತರಿ ಜಯಂತಿ ದಿನವನ್ನು 2016 ರಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಪ್ರಸಕ್ತ ಸಾಲಿನ 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಒಂದು ಆರೋಗ್ಯಕ್ಕಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದ್ದು, ಆಯುರ್ವೇದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನವಂಬರ್ 1 ರಿಂದ ಜಿಲ್ಲೆಯ 30 ಆಯುರ್ವೇದ ಆಸ್ಪತ್ರೆಗಳಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ ಆಯುರ್ವೇದ, ವಿದ್ಯಾರ್ಥಿಗಳಿಗೆ ಆಯುರ್ವೇದ ಮತ್ತು ರೈತರಿಗೆ ಆಯುರ್ವೇದ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದರು.

ಕಿರು ನಾಟಕ: ಅಶ್ವಿನಿ, ತಪೋವನ ಮತ್ತು ಸುಶೃತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಂದ ಆಯುರ್ವೇದದ ಮೂಲಕ ಆರೋಗ್ಯ ರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಿರು ನಾಟಕ ಪ್ರದರ್ಶನ ಹಾಗೂ ಪ್ರಾಂಶುಪಾಲರು ಉಪನ್ಯಾಸ ನೀಡಿದರು. ಆಯುಷ್ ಇಲಾಖೆಯಿಂದ ತಾತ್ಕಾಲಿಕ ಆಯುರ್ವೇದ ಔಷಧಿ ಮಳಿಗೆ ಸ್ಥಾಪಿಸಿ ಔಷಧಿ ವಿತರಿಸಲಾಯಿತು.

ಮಹಾನಗರ ಪಾಲಿಕೆ 39 ನೇ ವಾರ್ಡ್ ಸದಸ್ಯೆ ಗೀತಾ ದಿಳ್ಳೆಪ್ಪ, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್, ಜಿಲ್ಲಾ ಪ್ರಭಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮುರಳಿಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾಗೇಂದ್ರಪ್ಪ, ನಿಮಾ ಸಂಘದ ಪದಾಧಿಕಾರಿ ಡಾ.ಮಂಜುನಾಥ್ ಹಾಗೂ ವೈದ್ಯಾಧಿಕಾರಿ ಡಾ. ಶಾಂತಮೂರ್ತಿ ಉಪಸ್ಥಿತರಿದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *