Connect with us

Dvgsuddi Kannada | online news portal | Kannada news online

ದಾವಣಗೆರೆ; ಬಡವರ, ಮಧ್ಯಮ ವರ್ಗದ ಬಜೆಟ್ ; ಜಿಲ್ಲೆಯಲ್ಲಿ ಈ ಹಿಂದೆ ನಡೆದ ಎಲ್ಲ ಕಾಮಗಾರಿಗಳ ತನಿಖೆ; ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

IMG 20230418 111143

ದಾವಣಗೆರೆ

ದಾವಣಗೆರೆ; ಬಡವರ, ಮಧ್ಯಮ ವರ್ಗದ ಬಜೆಟ್ ; ಜಿಲ್ಲೆಯಲ್ಲಿ ಈ ಹಿಂದೆ ನಡೆದ ಎಲ್ಲ ಕಾಮಗಾರಿಗಳ ತನಿಖೆ; ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಡವರ ಮತ್ತು ಮಧ್ಯಮ ವರ್ಗದವರಿಗೆ ಬಜೆಟ್​. ಇದೊಂದು ಅತ್ಯುತ್ತಮ ಬಜೆಟ್ ಆಗಿದ್ದು, ಐದು ಗ್ಯಾರಂಟಿಗಳನ್ನು ಈಡೇರಿಸಲು ಒಳ್ಳೆಯ ಬಜೆಟ್​ ಕೊಟ್ಟಿದ್ದಾರೆ ಎಂದು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್​.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಮಾಡಿದ್ದ ಯೋಜನೆಗಳು ಸ್ಥಗಿತವಾಗಿದ್ದವು. ಈ ಅವುಗಳನ್ನು ಈಗ ಮತ್ತೆ ಕಾರ್ಯರೂಪಕ್ಕೆ ತಂದಿದ್ದೇವೆ ದಾವಣಗೆರೆ ಜಿಲ್ಲೆಯಲ್ಲಿ ಈ ಹಿಂದೆ ನಡೆದ ಕಾಮಗಾರಿಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ. ಅದರ ವರದಿ ಬಂದ ಮೇಲೆ ಇವರ ಹಣೆಬರಹ ಜನರಿಗೆ ಗೊತ್ತಾಗುತ್ತದೆ. ಎಲ್ಲೆಲ್ಲಿ ಕಳೆಪೆಯಾಗಿವೆ ಅವುಗಳನ್ನು ನಾವು ತೋರಿಸುತ್ತೇವೆ. ಜಿಲ್ಲೆಯ ಕೆಲ ಇಲಾಖೆಗಳಲ್ಲಿ ಭ್ರಷ್ಟಾಚಾರ, ಅವ್ಯವಹಾರ ಆಗಿದೆ ಎಂದು ಅರ್ಜಿ ಬಂದಿವೆ. ಸರ್ಕಾರಿ ಭೂಮಿಯನ್ನು ದುರುಪಯೋಗ ಮಾಡಿರುವ ಕುರಿತು ತನಿಖೆ ಮಾಡುತ್ತೇವೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.

ಬಿಜೆಪಿಯವರಿ ಕುಂದವಾಡ ಕೆರೆಗೆ 13 ಕೋಟಿ ಖರ್ಚು ಮಾಡಿದ್ದಾರೆ. ಆದರೆ, ನಾವು ಮಾಡಿದ್ದು ಖರ್ಚು ಮಾಡಿದ್ದೇ 3 ಕೋಟಿ. ಇಂತಹ ಕೆಲಸಗಳು ಸಾಕಷ್ಟು ಆಗಿವೆ. ಎಲ್ಲೆಲಿ ಕಳಪೆ ಕಾಮಗಾರಿಗಳು ನಡೆದಿವೆ ಅದರ ಬಗ್ಗೆ ತನಿಖೆ ಮಾಡತ್ತೇವೆ. ನಮ್ಮ ತಂದೆಯವರು ಹೇಳಿದಂತೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರನ್ನು ಸೋಲಿಸುವುದೇ ನಮ್ಮ ಪಕ್ಷದ ಗುರಿ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top