Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆಯಿಂದ ಎರಡು ದಿನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಪ್ರವಾಸ

ದಾವಣಗೆರೆ

ದಾವಣಗೆರೆ: ನಾಳೆಯಿಂದ ಎರಡು ದಿನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಪ್ರವಾಸ

ದಾವಣಗೆರೆ: ನಗರಾಭಿವೃದ್ದಿ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಮೇ 7 ಮತ್ತು 8 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಮೇ 6 ರ ಸಂಜೆ 6.30 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 7.30 ಕ್ಕೆ ಹಿರಿಯೂರು ತಲುಪಿ ವಾಸ್ತವ್ಯ ಮಾಡುವರು. ಮೇ 7 ರ ಬೆಳಗ್ಗೆ 6.30 ಕ್ಕೆ ಹಿರಿಯೂರಿನಿಂದ ಹೊರಟು ಬೆಳಗ್ಗೆ 8.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಕೋವಿಡ್-19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸಭೆ ನಡೆಸುವರು.

ಅದೇ ದಿನ ಮಧ್ಯಾಹ್ನ 12.30 ಗಂಟೆಗೆ ದಾವಣಗೆರೆಯಿಂದ ಹೊರಟು ಚಿತ್ರದುರ್ಗದ ಮಾರ್ಗವಾಗಿ ಮಧ್ಯಾಹ್ನ 2.30ಕ್ಕೆ ಹಿರಿಯೂರು ತಲುಪಿ ವಾಸ್ತವ್ಯ ಮಾಡುವರು.  ಮೇ.08 ರಂದು ಬೆಳಗ್ಗೆ 8.30 ಕ್ಕೆ ಹಿರಿಯೂರಿನಿಂದ ಹೊರಟು ಬೆಳಗ್ಗೆ 10.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ದಾವಣಗೆರೆ ಜಿಲ್ಲೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ಹಾಗೂ ಪರಿಶೀಲನೆ ಮಾಡುವರು. ಅದೇ ದಿನ ಮಧ್ಯಾಹ್ನ 12.30 ಗಂಟೆಗೆ ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top