ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಾಂತ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ: ಮನೆ ಕಳ್ಳತನ ಆರೋಪಿ ಬಂಧನ; 5.31 ಲಕ್ಷ ಮೌಲ್ಯದ ಸ್ವತ್ತು ವಶ
ಇಂದಿನ ಯುವ ಸಮೂಹ ದುಷ್ಚಟವಾದ ಮಾದಕ ವಸ್ತುಗಳ ಸೇವೆನೆಯಿಂದ ಚಿಕ್ಕ ವಯಸ್ಸಿನಲ್ಲಿಯೇ / ವಿದ್ಯಾರ್ಥಿ ದೆಸೆಯಲ್ಲಿಯೇ ಹಾಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಸನ / ಮಾದಕ ವಸ್ತುಗಳ ಮಾರಾಟದ ಸಾಮಾಜಿಕ ಪಿಡುಗನ್ನು ತಡೆಯಲು ಹಾಗೂ ಅದನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್.ಟಿ.,ಜಿಲ್ಲೆಯಲ್ಲಿ ಹಾಗು ಪೊಲೀಸ್ ಠಾಣಾ ಮಟ್ಟದಲ್ಲಿ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ದಾವಣಗೆರೆ: ಸರ್ಕಾರದಿಂದ 200 ಮನೆ ಹಂಚಿಕೆಗೆ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವೆನೆ ಹಾಗೂ ಮಾರಾಟ ಮಾಡುವವರ ಮೇಲೆ ಕಾರ್ಯಾಚರಣೆ ಕೈಗೊಂಡು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ & ಮಾರಾಟ ಮಾಡುವವರ ವಿರುದ್ಧ ಹಲವು NDPS ಆಕ್ಟ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿದಿನ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಾದಕ ಮಾದಕ ವಸ್ತುಗಳ ಸೇವನೆ & ಮಾರಾಟ ಮಾಡುವವರ ಮೇಲೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿರುತ್ತದೆ.
ಆಯಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರುಗಳ ಮಾರ್ಗದರ್ಶನದಲ್ಲಿ ಇಂದು ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿಗಾಗಿ ವಿಶೇಷ ಕಾರ್ಯಚರಣೆ/ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಾದ್ಯಾಂತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳಿಗೆ ಪೊಲೀಸ್ ಅಧಿಕಾರಿ ಸಿಬ್ಬಂದಿರವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟ, ಉತ್ಪಾದನೆ, ವಿತರಣೆ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆಗುವ ತೊಂದರೆಗಳ ಬಗ್ಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 167 ಶಾಲಾ ಕಾಲೇಜುಗಳಿಗೆ ಇಂದು ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಬೇಟಿ ನೀಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿಗಾಗಿ ವಿಶೇಷ ಕಾರ್ಯಚರಣೆ/ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಸುಮಾರು 14000 ಕ್ಕೂ ಹೆಚ್ಚು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.
ಸಾರ್ವಜನಿಕರ ಗಮನಕ್ಕೆ:ಸಾಮಾಜಿಕ ಪಿಡುಗಾದ ಮಾದಕ ವಸ್ತುಗಳ ಸೇವೆನೆ ಹಾಗೂ ಮಾರಾಟ ಮಾಡುವವರ ವಿರುದ್ದ ಪೊಲೀಸರ ನಿರಂತರ ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಕೈಜೋಡಿಸಬೇಕಾಗಿದೆ. ಆದ್ದರಿಂದ ಸಾರ್ವಜನಿಕಕರು ಮಾದಕ ವಸ್ತುಗಳ ಸೇವೆನೆ ಮಾಡಬಾರದು, ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು, ತಮ್ಮ ನೆರೆಹೊರೆಗಳಲ್ಲಿ/ತಮ್ಮ ಸುತ್ತ ಮುತ್ತ ಮಾದಕ ವಸ್ತುಗಳ ಸೇವನೆ ಮಾಡುವವರು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಕಂಡು ಬಂದರೆ ಸ್ಥಳೀಯ ಪೊಲೀಸರ ಗಮನಕ್ಕೆ / ತುರ್ತು ಸಹಾಯವಾಣಿ 112 ಕರೆ ಮಾಡಿ ಮಾಹಿತಿ ನೀಡುವ ಮೂಲಕ ಈ ಸಾಮಾಜಿಕ ಪಿಡುಗಾದ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಮಾಡುವವರ ವಿರುದ್ದ ಪೊಲೀಸರ ನಿರಂತರ ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಕೈಜೋಡಿಸಲು ಈ ಮೂಲಕ ಕೋರಿದೆ.


