Connect with us

Dvgsuddi Kannada | online news portal | Kannada news online

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಗೆ ಕೊಲೆ ಬೆದರಿಕೆ ಪತ್ರ

ದಾವಣಗೆರೆ

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಗೆ ಕೊಲೆ ಬೆದರಿಕೆ ಪತ್ರ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  (ದೂಡಾ) ರಾಜನಹಳ್ಳಿ ಶಿವಕುಮಾರ್ ಗೆ  ಕೊಲೆ ಬೆದರಿಕೆ ಪತ್ರವೊಂದು  ಬಂದಿದೆ. ಈ ಪತ್ರದಲ್ಲಿ ಎಸ್ ಎಸ್ ಮಾಲ್ ವಿಚಾರಕ್ಕೆ ಬಂದ್ರೆ ಗತಿ ಸರಿ ಇರಲ್ಲ ಎಂದು  ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ ರಾಜನಹಳ್ಳಿ ಶಿವಕುಮಾರ್, ನಗರದ ಎಸ್ ಎಸ್ ಮಾಲ್ ಕಟ್ಟುವಾಗ ಮಹಾನಗರ ಪಾಲಿಕೆ ಜಾಗ ಒತ್ತುವರಿಯಾಗಿದ್ದು, ಶೀಘ್ರವೇ ತೆರವುಗೊಳಿಸುವುದಾಗಿ ಹೇಳಿಕೆ ನೀಡಿದ್ದರು. ಈ ವಿಚಾರವನ್ನೇ ಪ್ರಸ್ತಾಪಿಸಿ ಪತ್ರ ಬರೆದಿರುವ ಗಂಗಾಧರ್ ಹನುಂತಪ್ಪ ಎಂಬುವರು ಕೊಲೆ ಬೆದರಿಕೆ ಹಾಕಿದ್ದಾರೆ.  ಈ ಎಸ್ ಎಸ್ ಮಾಲ್ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಎಸ್ ಎಸ್ ಗಣೇಶ್ ಅವರಿಗೆ ಸೇರಿದ ಮಾಲ್ ಆಗಿದೆ. ಈ ಕೊಲೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಬಸವನಗರ ಪೊಲೀಸ್ ಠಾಣೆಯಲ್ಲಿ ರಾಜನಹಳ್ಳಿ ಶಿವಕುಮಾರ್ ದೂರು ನೀಡಲು ನಿರ್ಧರಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top