ಹನಿ ನೀರಾವರಿ ಸಹಾಯಧನ ಪಡೆಯಲು ದಾವಣಗೆರೆ ರೈತರು ಈ ನಂಬರ್ ಸಂಪರ್ಕಿಸಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ಪ್ರಸಕ್ತ ಸಾಲಿನ ಕೇಂದ್ರ ಪುರಷ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಸಹಾಯಧನ ನೀಡಲಾಗುವುದು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ರೈತರಿಗೆ ಶೇ.90 ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಶೇ.45 ರಷ್ಟು ಸಹಾಯಧನ ಲಭ್ಯವಿದ್ದು, ಸಣ್ಣ ಮತ್ತು ಅತಿಸಣ್ಣ ರೈತರು ಕಡ್ಡಾಯವಾಗಿ ಕಂದಾಯ ಇಲಾಖೆಯಿಂದ ನೀಡುವ ಸಣ್ಣ, ಅತಿಸಣ್ಣ ಹಿಡುವಳಿದಾರರ ದೃಡೀಕರಣ ಪತ್ರ, ಪಹಣಿ, ಆಧಾರ್‍ಕಾರ್ಡ್, ಬ್ಯಾಂಕ್ ವಿವರಗಳೊಂದಿಗೆ ದಾವಣಗೆರೆ ತಾಲ್ಲೂಕು ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಆನಗೋಡು ಮೊ.ಸಂ:7019819101, ಮಾಯಕೊಂಡ ಮೊ.ಸಂ: 9902866619, 8722551293, 7899445111, ಕಸಬಾ ಮೊ.ಸಂ: 7022244152 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *