Connect with us

Dvgsuddi Kannada | online news portal | Kannada news online

ದಾವಣಗೆರೆ: ದುರ್ಗಾಂಬಿಕ ದೇವಿಯ ಜಾತ್ರೆ ಹಿನ್ನೆಲೆ ನಾಳೆಯಿಂದ ಎರಡು ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ದುರ್ಗಾಂಬಿಕ ದೇವಿಯ ಜಾತ್ರೆ ಹಿನ್ನೆಲೆ ನಾಳೆಯಿಂದ ಎರಡು ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ: ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟವನ್ನು ಮಾ.15 ರ ಬೆಳಿಗ್ಗೆ 06 ಗಂಟೆಯಿಂದ ಮಾ.16 ರ ಮಧ್ಯರಾತ್ರಿ 12 ಗಂಟೆಯವರೆಗೆ  ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ  ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಮಾ.13 ರಿಂದ ಮಾ.22 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕ ದೇವಿಯ ಜಾತ್ರೆ ನಡೆಯಲಿದೆ.  ಜಾತ್ರೆಗೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ. ಹಾಗೂ ಹಿಜಾಬ್ ವಿವಾದವು ಈಗಾಗಲೇ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಮತ್ತು ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಸುತ್ತಮುತ್ತ 500 ಮೀಟರ್  ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top