ದಾವಣಗೆರೆ: ನಗರದ ದೇವತೆ ದುರ್ಗಾಂಬಿಕಾ ದೇವಿ ಜಾತ್ರೆ ಹಾಗೂ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯ ಪ್ರಯುಕ್ತ ಜಾತ್ರೆಯ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಮಾ.5 ರಂದು ಸಂಜೆ 6 ಗಂಟೆಗೆ ಶ್ರೀದುರ್ಗಾಂಬಿಕಾದೇವಿಯ ದೇವಸ್ಥಾನದ ಆವರಣದಲ್ಲಿ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ.
ಮಾರ್ಚ್ 19 ಹಾಗೂ 20ರಂದು ದುರ್ಗಾಂಬಿಕಾ ತಾಯಿ ಜಾತ್ರಾ ಮಹೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುತ್ತದೆ. ದುರ್ಗಾಂಬಿಕಾ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಸೇರಲಿದ್ದು,ಜಾತ್ರೆಯ ಅವಧಿಯಲ್ಲಿ ಆಗಮಿಸುವ ಭಕ್ತಾಧಿಗಳಿಗೆ ಒದಗಿಸಬೇಕಾದ ಸೌಲಭ್ಯಗಳು ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಸಿದ್ದತೆಗಳ ಬಗ್ಗೆ ಜಿಲ್ಲಾಧಿಕಾರಿ ಸಭೆಯಲ್ಲಿ ಚರ್ಚಿಸಲಿದ್ದಾರೆ.



