ದಾವಣಗೆರೆ: ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಂದು (ಅ.28) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸುವರು, ಬಳಿಕ ನಗರದ ಸಿದ್ಧಗಂಗಾ ಶಾಲೆಗೆ ಭೇಟಿ ನೀಡುವರು. ನಂತರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 7 ಗಂಟೆಗೆ ದಾವಣಗೆರೆಯಿಂದ ಹೊರಟು, ತಿಪಟೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



