ದಾವಣಗೆರೆ: ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ, ಸಂತ ಸೇವಾಲಾಲ್ ವಸತಿ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಸತಿ ಶಾಲೆಗಳಲ್ಲಿಯೇ ಅರ್ಜಿಗಳನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಲ್ಲಿಯೇ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂನ್ 8 ರಿಂದ 16 ರವರೆಗೆ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 16 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 21 ರಂದು ಬೆಳಿಗ್ಗೆ 11ಕ್ಕೆ ಹರಿಹರ ತಾಲ್ಲೂಕಿನ ದೇವರಬೆಳಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.


