ದಾವಣಗೆರೆ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸಿಇಟಿ ಅಥವಾ ನೀಟ್ ಪರೀಕ್ಷೆ ಬರೆದು ವೃತ್ತಿಪರ ಕೋರ್ಸ್ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ‘ಅರಿವು’ ಸಾಲ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭದ್ರಾ ಜಲಾಶಯ ; ಮೇ 17ರಿಂದ ನೀರು ಹರಿಸುವಿಕೆ ಕಡಿತ
ವೈದ್ಯಕೀಯ (M.B.B.S), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಈ ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಅರ್ಹರಿರುತ್ತಾರೆ.
ಅಭ್ಯರ್ಥಿಗಳು ನಿಗಮದ ಅಧಿಕೃತ ಜಾಲತಾಣ kmdconline.karnataka.gov.in ಮೂಲಕ ಆನ್ಲೈನ್ನಲ್ಲಿ ಮೇ 30 ರೊಳಗೆ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಹಾರ್ಡ್ ಕಾಪಿ (Hard Copy) ಮತ್ತು ಇಂಡೆಮ್ನಿಟಿ ಬಾಂಡ್ (Indemnity Bond) ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002 ಅಥವಾ ದೂರವಾಣಿ ಸಂಖ್ಯೆ 8277944215 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



