ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ಗೆ 150 ಸ್ಥಾನ ಗೆಲ್ಲಲಿದೆ. ದಾವಣಗೆರೆ ಉತ್ತರಕ್ಕೆ ಸಿಎಂ ಬೊಮ್ಮಾಯಿ ಅಲ್ಲ, ಯಾರೇ ಬರಲಿ…ದಾವಣಗೆರೆ ದಕ್ಷಿಣಕ್ಕೂ ಬರಲಿ. ಇಲ್ಲಿ ಬಂದವರು ಸೋಲುವುದು ಖಚಿತ.ಎರಡು ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ 90 ಲಿಂಗಾಯತ ಶಾಸಕರಿದ್ದರು. ಈ ಹಿನ್ನೆಲೆಯಲ್ಲಿ ನಾನು 60-70 ಜನರಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದೇನೆ. ಕೊಟ್ಟರೆ, ಅವರೆಲ್ಲ ಗೆದ್ದರೆ ಈ ಬಾರಿ ಮುಖ್ಯಮಂತ್ರಿ ಲಿಂಗಾಯತರೇ ಆಗ್ತಾರೆ ಎಂದು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ನಾನು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ. ಸಮುದಾಯದ ಹಿತ ಕಾಪಾಡಬೇಕಾದದ್ದು ನನ್ನ ಕರ್ತವ್ಯ. ಅದಕ್ಕಾಗಿ 70 ಮಂದಿ ಲಿಂಗಾಯತರಿಗೆ ಟಿಕೆಟ್ ಕೊಡಿ ಎಂದು ಹೈಕಮಾಂಡ್ಗೆ ಕೇಳಿದ್ದೇನೆ.ಸಿಎಂ ಯಾರಾಗ್ಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತಾರೆ. ಅದರ ಜತೆ ಶಾಸಕರು ಸಿಎಂ ಆಯ್ಕೆ ಮಾಡ್ತಾರೆ. ಸದ್ಯ ಅವರಿಗೆ ಬೇಕಾದವರು ಸಿಎಂ ಎಂದು ಹೇಳುತ್ತಿದ್ದಾರೆ ಎಂದರು.



