Connect with us

Dvgsuddi Kannada | online news portal | Kannada news online

ದಾವಣಗೆರೆ: ಸರಳವಾಗಿ ಮೊದಲ ದಿನವೇ ನಾಮಪತ್ರ ಸಲ್ಲಿಸಿದ ಎಸ್.ಎಸ್. ಮಲ್ಲಿಕಾರ್ಜುನ; ಏ.17ರಂದು ಇನ್ನೊಮ್ಮೆ ನಾಮಪತ್ರ

ದಾವಣಗೆರೆ

ದಾವಣಗೆರೆ: ಸರಳವಾಗಿ ಮೊದಲ ದಿನವೇ ನಾಮಪತ್ರ ಸಲ್ಲಿಸಿದ ಎಸ್.ಎಸ್. ಮಲ್ಲಿಕಾರ್ಜುನ; ಏ.17ರಂದು ಇನ್ನೊಮ್ಮೆ ನಾಮಪತ್ರ

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌. ಮಲ್ಲಿಕಾರ್ಜುನ ಮೊದಲ ದಿನವೇ ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಕಾರ್ಯಕರ್ತರ, ನಾಯಕರ ಅಬ್ಬರವಿಲ್ಲದೆ ಸರಳವಾಗು ಬಂದ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಸಿದ್ದಾರೆ.ಸಲೀಂ ಸೈಯದ್‌ ಮತ್ತು ಕುಂದವಾಡ ಗಣೇಶ್‌ ಸೂಚಕರಾಗಿದ್ದರು. ಈ ಸಂದರ್ಭದಲ್ಲಿ ಪತ್ನಿ ಪ್ರಭಾ ಮಲ್ಲಿಕಾರ್ಜುನ, ವಕೀಲ ಸಲೀಂ ಸೈಯದ್‌, ಕುಂದವಾಡ ಗಣೇಶ್‌, ಎಚ್‌.ಬಿ. ಅರವಿಂದ್ ಇದ್ದರು.

ಏ.17ರಂದು ಕಾರ್ಯಕರ್ತರೊಂದಿಗೆ ಅಬ್ಬರದ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಅಂದೇ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಲ್ಲಿಕಾರ್ಜುನ್, ದೇವರ ಅಪ್ಪಣೆ ಮೇರೆಗೆ ಇವತ್ತು ನಾಮಪತ್ರ ಸಲ್ಲಿಸಿದ್ದಾನೆ. ಏ.17 ರಂದು ಮತ್ತೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜನರ ಪ್ರೀತಿ ನಮ್ಮ ಕಡೆ ಇದ್ದು, ಅಭಿವೃದ್ಧಿ ಕಾರ್ಯ ಮಾಡದ ಬಿಜೆಪಿ ಬಗ್ಗೆ ಜನರ ಬೇಸರವಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top