Connect with us

Dvgsuddi Kannada | online news portal | Kannada news online

ದಾವಣಗೆರೆ:  ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ದಾವಣಗೆರೆ

ದಾವಣಗೆರೆ:  ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ದಾವಣಗೆರೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಜೂ.05 ರಂದು ವಿಶ್ವ ಪರಸರ ದಿನಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಚಿತ್ರ ಬರೆಯಲಾ?, ಕಲೆ ಇಲ್ಲದಿದ್ದರೆ ಇಳೆಗೆ ಕಳೆ ಇಲ್ಲ ! ಭೂಮಿಯನ್ನು ರಕ್ಷಿ, ನಿಮ್ಮ ಐಡಿಯಾಗಳನ್ನು ಚಿತ್ರಿಸಿ! ಎಂಬ ವಾಕ್ಯದೊಂದಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ 5ನೇ ತರಗತಿಯವರೆಗಿನ ಮಕ್ಕಳಿಗೆ ನನ್ನ ಸುಂದರ ಜಗತ್ತು ಎಂಬ ವಿಷಯದ ಚಿತ್ರಕಲೆ, 6 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಮರ, ಕಾಡು ಮತ್ತು ಮಳೆ ಎಂಬ ವಿಷಯದ ಬಗ್ಗೆ, 11ನೇ ತರಗತಿಯಿಂದ ಪದವಿವರೆಗಿನ ಮಕ್ಕಳಿಗೆ ಸಮುದ್ರವನ್ನು ಕಾಪಾಡಿ ಎಂಬ ವಿಷಯದ ಬಗ್ಗೆ ಚಿತ್ರಿಸಬೇಕು.

ಬಿಡಿಸಿದ ಚಿತ್ರಕಲೆಯನ್ನು ಇಮೇಲ್ ಮುಖಾಂತರ ms@kspcb.gov.in and seo-awrn@kspcb.gov.in ಅಥವಾ ಅಂಚೆಯಲ್ಲಿ The member secretary, KSPCB, Parisara Bhavana, Church Street Bangaluru-560001.ಗೆ ಮೇ.30 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ www.kspcb.karnataka.gov.in ನ್ನು ಸಂಪರ್ಕಿಸಬಹುದೆಂದು ಕರಾಮಾನಿಮಂ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top