ದಾವಣಗೆರೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಗೌಣ. ಈ ಯೋಜನೆಗಳು ಲೋಕಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿಗಾಗಿ ಕಾಂಗ್ರೆಸ್ ಸರ್ಕಾರ , ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗಾಗಿ ಇಟ್ಟಿದ್ದ 11,164 ಕೋಟಿ ಹಣ ಬಳಸಿಕೊಂಡಿದೆ. ಈ ಸರ್ಕಾರ ಪರಿಶಿಷ್ಟರ ವಿರೋಧಿ. ಇದಕ್ಕೆ ಚುನಾವಣೆಯಲ್ಲಿ ಮತದಾರರು ಉತ್ತರ ಕೊಡುತ್ತಾರೆ ಎಂದರು.
ಈ ಬಾರಿ ರಾಜ್ಯದಲ್ಲಿ ಎನ್ ಡಿಎ 24ರಿಂದ 25 ಸ್ಥಾನ ಗೆಲ್ಲುತ್ತದೆ ಎಂದು ಸಮೀಕ್ಷೆಯೇ ಹೇಳುತ್ತಿದೆ. ಕಾಂಗ್ರೆಸ್ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಲಿ . ಯಾವುದೇ ವ್ಯಕ್ತಿಯ ಹೆಸರು ಹೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ.ಜೆಡಿಎಸ್ ಜೊತೆ ಮೈತ್ರಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದ್ದೇವೆ. ಈಗಾಗಲೇ 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುತ್ತೇನೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ’ ಎಂದರು.
ಕೇಂದ್ರ ಸರ್ಕಾರದಿಂದ. ತೆರಿಗೆ ಹಣ ಬಂದಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಕಇಷ್ಟರಲ್ಲಿಯೇ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದರು. ಮಾಜಿ ಸಚಿವ ಮುರುಗೇಶ ನಿರಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಯಶವಂತರಾವ್ ಜಾಧವ್, ಗಿರೀಶ್ ಉಪ್ಪಾರ್, ಕೊಳೇನಹಳ್ಳಿ ಸತೀಶ್ ಇದ್ದರು.



