Connect with us

Dvgsuddi Kannada | online news portal | Kannada news online

ದಾವಣಗೆರೆ: ಕಡಿಮೆ ದರಕ್ಕೆ ಮರಳು ಸಿಗದಿದ್ದರೆ ಹೋರಾಟ; ಮಾಜಿ ಸಚಿವ ರೇಣುಕಾಚಾರ್ಯ

IMG 20231121 214422

ದಾವಣಗೆರೆ

ದಾವಣಗೆರೆ: ಕಡಿಮೆ ದರಕ್ಕೆ ಮರಳು ಸಿಗದಿದ್ದರೆ ಹೋರಾಟ; ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ನಮ್ಮ ಸರ್ಕಾರದ ಅವಧಿಯಲ್ಲಿ ಕಡಿಮೆ ದರಕ್ಕೆ ಮರಳ ಸಿಗುತಿತ್ತು. ಈಗ ಹತ್ತು ಸಾವಿರ ಕೊಟ್ಟರೂ ಒಂದು ಲೋಡ್ ಮರಳು ಸಿಗುತ್ತಿಲ್ಲ. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ಮರಳಿನ ದಂಧೆ ಆರಂಭವಾಗಿದೆ. ಎಲ್ಲರಿಗೂ ಕಡಿಮೆ ದರಕ್ಕೆ ಮರಳ ಸಿಗಬೇಕು. ಮುಕ್ತವಾಗಿ ಕಡಿಮೆ ದರಕ್ಕೆ ಮರಳು ಸಿಗಬೇಕು. ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಎಸಿ ಅವರಿಗೂ ಹೇಳಿದ್ದೇನೆ. ಕಡಿಮೆ ದರ ನಿಗದಿಪಡಿಸುವಂತೆ ಹೇಳಿದ್ದೇನೆ. ವಿನಾಃ ಕಾರಣನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಇಲ್ಲಿ ಸೀಜ್ ಆದ ಮರಳು ಹೊಸದುರ್ಗಕ್ಕೆ ಕಳುಹಿಸಲಾಗುತ್ತಿದೆ. ಕಡಿಮೆ ದರಕ್ಕೆ ಮರಳು ಸಿಗದಿದ್ದರೆ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.

ಹೊನ್ನಾಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊನ್ನಾಳಿ ತಾಲೂಕಿನಲ್ಲಿ ಮಟ್ಕಾ, ಇಸ್ಪೀಟ್ ಅಡ್ಡೆಗಳು ,ಮಾಂಗಲ್ಯ ಸರಗಳ್ಳತನ ಹೆಚ್ಚಾಗಿವೆ. ಆದಷ್ಟು ಬೇಗ ಎಸ್ಪಿ ಉಮಾ ಪ್ರಶಾಂತ್ ಅವರು ಕಡಿವಾಣ ಹಾಕಬೇಕು. ಇಲ್ಲದಿದ್ದರೆ, ಎಸ್ಪಿ ಗಿಸ್ಪಿಗೆ ಕಂಪ್ಲೆಂಟ್ ಕೊಡಲ್ಲ. ನೇರ ಡಿಜಿಗೆ ಹೋಗಿ ಕಂಪ್ಲೆಂಟ್ ಕೊಡ್ತೇನೆ.ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸಬೇಕು. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ವಾ. ಓಸಿ, ಇಸ್ಪೀಟ್ ಇದೇ ರೀತಿಯಲ್ಲಿ ಮುಂದುವರಿದರೆ ಡಿಜಿಗೆ ಹೋಗಿ ಕಂಪ್ಲೆಂಟ್ ಕೊಡ್ತೇನೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top