ದಾವಣಗೆರೆ: 2025 -26ನೇ ಸಾಲಿನಲ್ಲಿ ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸಮಗ್ರ ಕೃಷಿ ಪದ್ಧತಿ, .ಬೆಳೆ ಪದ್ಧತಿಗಳು ಮತ್ತು ಬೆಳೆವೈವಿಧ್ಯಕರಣ/ ಸಾವಯವ ಕೃಷಿ/ಕೃಷಿ ಯಂತ್ರೋಪಕರಣ ಅಭಿವೃದ್ಧಿ/ ನೀರಿನ
ಸಾಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಆಸಕ್ತ ರೈತರಿಂದ ಕೃಷಿ
ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು.
ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ/ಸಮಗ್ರನೀರು ನಿರ್ವಹಣೆ/ ಸಾವಯವ ಕೃಷಿ/ ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ ತೋಟಗಾರಿಕೆ ಹೈನುಗಾರಿಕೆ/ ಕೋಳಿ ಸಾಕಣಿಕೆ/ ಮೀನುಗಾರಿಕೆ/ ರೇಷ್ಮೆ ಬೇಸಾಯ। ಹೈಟೆಕ್ ಹಸಿರುಮನೆ ಅಳವಡಿಕೆ ಕೃಷಿಸಂಸ್ಕರಣೆ/ ಅರಣ್ಯ ಕೃಷಿ/ ಆಡು, ಕುರಿ, ಮೊಲ ಇತ್ಯಾದಿ ಸಾಕಣಿಕೆ ಚಟುವಟಿಕೆಯಲ್ಲಿ ತೊಡಗಿರಬೇಕು.
ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜು.5 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ತಾಲೂಕು ಸಹಾಯಕ ಕೃಷಿನಿರ್ದೇಶಕರು/ ರೈತಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಲು ಜಂಟಿ ಕೃಷಿ
ನಿರ್ದೇಶಕರು ತಿಳಿಸಿದ್ದಾರೆ.



