ದಾವಣಗೆರೆ: ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾಲ ತೀರಿಸಲಾಗದೆ ಬೇಸತ್ತು ತನ್ನ ಜಮೀನಿನಲ್ಲಿ ಅಳವಡಿಸಿದ್ದ ಹೈಟೆನ್ಷೆನ್ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ತಾಲೂಕಿನ ಗುಡಾಳು ಗೊಲ್ಲರಹಟ್ಟಿ ಗ್ರಾಮದ ರೈತ ಹನುಮಂತಪ್ಪ (40)ಮೃತ ರೈತ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.

ಬ್ಯಾಂಕ್ ನಲ್ಲಿ 4 ಲಕ್ಷ ರೂ.ಗಳ ಮನೆ ಸಾಲ ಹಾಗೂ 3.5 ಲಕ್ಷ ರೂ.ಗಳ ಕುರಿ ಸಾಲ ಪಡೆದಿದ್ದರು. ಇದರ ಜತೆಗೆ ಬೆಳೆ ಸಾಲ ಮಾಡಿದ್ದರು. ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮನೆ ಸಾಲವನ್ನು ಹನುಮಂತಪ್ಪ ಕಂತು ರೂಪದಲ್ಲಿ ಕಟ್ಟುತ್ತಿದ್ದರು. ಏಕ ಅವಧಿಯಲ್ಲಿ ಸಾಲ ತೀರುವಳಿಗೆ ಮನವಿ ಮಾಡಿದ್ದರು.
ಅದರಂತೆ ನಿಗದಿಪಡಿಸಿದ್ದ 2.10 ಲಕ್ಷ ರೂ. ತುಂಬಲು ಹೋದಾಗ ಮನೆ ಮೇಲಿನ ಸಾಲ ತೀರಿಸಿದಲ್ಲಿ ಮಾತ್ರವೇ ಕುರಿ ಸಾಲದ ಕಂತು ಕಟ್ಟಿಸಿಕೊಳ್ಳುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದರು.

ಈ ನಡುವೆಯೇ ಮನೆ ಜಪ್ತಿಗೆ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದರು. ಬ್ಯಾಂಕ್ ಅಧಿಕಾರಿಗಳ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಭಾನುವಾರ ನೇಣಿಗೆ ಶರಣಾದರು. ಶವಾಗಾರದ ಬಳಿ ರೈತರು ಪ್ರತಿಭಟಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *