ದಾವಣಗೆರೆ: ಸಾಲದ ಹೊರೆಯಿಂದ ಒಂದೇ ದಿನ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆ…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾಲದ ಹೊರಯಿಂದ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಎಳೆಹೊಳೆ ಗ್ರಾಮದ ಅಶೋಕ ಹಾಗೂ ನ್ಯಾಮತಿ ತಾಲ್ಲೂಕಿನ ಕುರುವ ತಾಂಡಾದ ರೈತ‌ ಮಹಿಳೆ ಕಮಲಾಬಾಯಿ (50) ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಳೆಹೊಳೆ ಗ್ರಾಮದ ಅಶೋಕ ಕೃಷಿ ಹಾಗೂ ಟ್ರ್ಯಾಕ್ಟರ್ ಖರೀದಿಗೆ ಬ್ಯಾಂಕ್‌ನಲ್ಲಿ 4 ಲಕ್ಷ, ವೈಯಕ್ತಿಕವಾಗಿ 6 ಲಕ್ಷ ಸಾಲ ಮಾಡಿದ್ದರು. ಸಮರ್ಪಕ ಮಳೆಯಾಗದ ಕಾರಣ ಮೂರು ವರ್ಷಗಳಿಂದ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ನ್ಯಾಮತಿ ತಾಲ್ಲೂಕಿನ ಕುರುವ ತಾಂಡಾದ ರೈತ ಮಹಿಳೆ ಕಮಲಾಬಾಯಿ (50) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ 2 ಎಕರೆ ಜಮೀನು ಇದ್ದು, ಒಂದು ವರ್ಷದ ಹಿಂದೆ ಅಡಿಕೆ ತೋಟ ಮಾಡಿದ್ದರು. ಮಗಳ ಮದುವೆಗೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 50,000 ಹಾಗೂ ವೈಯಕ್ತಿಕವಾಗಿ 5.40 ಲಕ್ಷ ಸಾಲ ಮಾಡಿದ್ದರು. ಮಳೆ ಕೈಕೊಟ್ಟ ಕಾರಣ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *