Connect with us

Dvgsuddi Kannada | online news portal | Kannada news online

ಉಕ್ಕಡಗಾತ್ರಿ ಸಮೀಪದ ಪತ್ತೆಪುರ ಗ್ರಾಮದಲ್ಲಿ ಪಂಪ್ ಸೆಟ್ ದುರಸ್ತಿ ಮಾಡುವಾಗ ವಿದ್ಯುತ್ ಶಾಕ್; ಅಪ್ಪ‌-ಮಗ ಸಾವು

ದಾವಣಗೆರೆ

ಉಕ್ಕಡಗಾತ್ರಿ ಸಮೀಪದ ಪತ್ತೆಪುರ ಗ್ರಾಮದಲ್ಲಿ ಪಂಪ್ ಸೆಟ್ ದುರಸ್ತಿ ಮಾಡುವಾಗ ವಿದ್ಯುತ್ ಶಾಕ್; ಅಪ್ಪ‌-ಮಗ ಸಾವು

ದಾವಣಗೆರೆ: ಪಂಪ್‌ಸೆಟ್‌ ದುರಸ್ತಿ ಮಾಡುವಾಗ ವಿದ್ಯುತ್ ಶಾಕ್ ಹೊಡೆದು ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಉಕ್ಕಡಗಾತ್ರಿ ಸಮೀಪದ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ.

ಭತ್ತದ ಬೆಳೆಗೆ ನೀರು ಹಾಯಿಸುವ ಪಂಪ್ ಸೆಟ್ ಹಾಳಾಗಿದ್ದು , ದುರಸ್ತಿ ಮಾಡಿ ಮೋಟಾರು ಸ್ಟಾರ್ಟ್ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್‌ ಆಘಾತದಿಂದ ತಂದೆ-ಮಗ ಪಂಪಸೇಟ್ ಮೇಲೆಯೇ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.

ಕರಬಸಪ್ಪ‌ ಕಡೇನಾಯಕನಹಳ್ಳಿ(50) ಹಾಗೂ ಅವರ ಮಗ ದರ್ಶನ (26) ಮೃತ ದುರ್ದೈವಿಗಳಾಗಿದ್ದಾರೆ . ಹಲಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮಳೆಗಾಲದಲ್ಲಿ ರೈತರ ವಿದ್ಯುತ್ ಗ್ರೌಂಡ್ ಬಗ್ಗೆ ರೈತರು ಎಚ್ಚರಿಕೆ ವಹಿಸಬೇಕು ಎಂದು ಬೆಸ್ಕಾಂ ತಿಳಿಸಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top