ದಾವಣಗೆರೆ: ಸಾಲದ ಬಾಧೆಯಿಂದ ವಿಷ ಸೇವಿಸಿ ರೈತನೊಬ್ಬ ಸಾವಿಗೆ ಶರಣಾಗಿರುವಂತಹ ಘಟನೆ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜಪ್ಪ (50) ಸಾವಿಗೆ ಶರಣಾದ ರೈತನಾಗಿದ್ದಾನೆ. ಎರಡು ಎಕರೆ ಜಮೀನು ಹೊಂದಿದ್ದ ರೈತ, ಬೆಳೆ ಕೈಕೊಟ್ಟ ಹಿನ್ನೆಲೆ ನಿನ್ನೆ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ. ಇಂದು ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ವಿವಿಧ ಕಡೆ ಐದು ರಿಂದ ಆರು ಲಕ್ಷ ಸಾಲ ಮಾಡಿದ್ದರು ಎನ್ನಲಾಗುತ್ತಿದೆ. ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



