ದಾವಣಗೆರೆ: ಅಡಿಕೆ ತೋಟ ಉಳಿಸಿಕೊಳ್ಳಲು ಕೊರೆಸಿದ ಎರಡೂ ಬೋರ್‌ವೆಲ್‌ ಫೇಲ್ ಆಗಿದ್ದಕ್ಕೆ ರೈತ ಆತ್ಮಹತ್ಯೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಡಿಕೆ ತೋಟ ಉಳಿಸಿಕೊಳ್ಳಲು ಕೊರೆಸಿದ ಎರಡೂ ಬೋರ್‌ವೆಲ್‌ ಫೇಲ್ ಆಗಿದ್ದಕ್ಕೆ ಬೇಸತ್ತು ತಾಲೂಕಿನ ಕೊಗ್ಗನೂರು ಗ್ರಾಮದ ರೈತ ಕೆ.ಎಸ್. ಶಿವಪ್ಪ (51) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಿವಪ್ಪ ಹೊಂದಿದ್ದ ಮೂರೂವರೆ ಎಕರೆ ಜಮೀನಿನಲ್ಲಿ ಎರಡು ವರ್ಷದ ಅಡಕೆ ಬೆಳೆಗಳಿಗೆ ನೀರುಣಿಸಬೇಕಿತ್ತು. ಮೊದಲಿನ ಬೋರ್‌ವೆಲ್‌ನಲ್ಲಿ ಅಂತರ್ಜಲ ಬತ್ತಿತ್ತು. ಒಂದು ತಿಂಗಳಲ್ಲಿ ಎರಡು ಬೋರ್‌ವೆಲ್ ಕೊರೆಸಿದ್ದರೂ ನಿರೀಕ್ಷಿತ ನೀರು ಬಿದ್ದಿರಲಿಲ್ಲ. ಖಾಸಗಿ ಸಾಲ ಮಾಡಿಕೊಂಡಿದ್ದ ಇದರಿಂದ ಬೇಸತ್ತ ಶಿವಪ್ಪ, ಬೆಳಗ್ಗೆ ಕೃಷಿ ಕೆಲಸಕ್ಕೆ ಹೋಗಿದ್ದು ಮನೆಗೆ ಮರಳಿರಲಿಲ್ಲ. ಮಗ ಸ್ಥಳಕ್ಕೆ ಬಂದು ನೋಡಿದಾಗ ತಂದೆ ಮೃತಪಟ್ಟಿದ್ದು ಕಂಡುಬಂದಿದೆ. ಪತ್ನಿ, ಇಬ್ಬರು ಪುತ್ರರಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *