Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲಭಾದೆ ತಾಳಲಾರದೇ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ

ದಾವಣಗೆರೆ: ಸಾಲಭಾದೆ ತಾಳಲಾರದೇ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಭಾದೆ ತಾಳಲಾರದೇ ರೈತನೊಬ್ಬ ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡ ಘಟನೆ‌ ಜಿಲ್ಲೆಯ ಚನ್ನಗಿರಿನಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕಿನ ನೆಲ್ಲಿಹಂಕಲು ಗ್ರಾಮದ ಛತ್ರಾನಾಯ್ಕ (53) ಮೃತ ರೈತ. ಅವರಿಗೆ ನೆಲ್ಲಿಹಂಕಲು ಗ್ರಾಮದಲ್ಲಿ 2.35 ಎಕರೆ ಜಮೀನು ಇದ್ದು, ಖಾಸ ಕೃಷಿಗಾಗಿ 5 ಲಕ್ಷ ಹಾಗೂ ತಾವರೆಕೆರೆ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಲಕ್ಷ ಸೇರಿ ಒಟ್ಟು 6 ಲಕ್ಷ ಸಾಲ ಪಡೆದಿದ್ದನು. ಬೇರೆಯವರ 6 ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ವ್ಯವಸಾಯ ಮಾಡುತ್ತಿದ್ದರು. ಕಳೆದ ವರ್ಷದ ಅತಿವೃಷ್ಟಿಯಿಂದಾಗಿ ಜಮೀನಿನಲ್ಲಿ ಬೆಳೆ ಕೈ ಕೊಟ್ಟಿದ್ದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top