ದಾವಣಗೆರೆ: ಸಾಲಬಾಧೆ ತಾಳಲಾರದೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಸಿದ್ದಪ್ಪ (52) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದಪ್ಪ ರಾಷ್ಟ್ರೀಕೃತ ಬ್ಯಾಂಕ್, ಸೊಸೈಟಿ ಹಾಗೂ ಕೈ ಸಾಲವಾಗಿ 12 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು.
ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿದ್ದಪ್ಪ ಅವರನ್ನು ದಾವಣಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಿದ್ದಪ್ಪಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಳೆ ಇಲ್ಲದೆ ಬೆಳೆ ಕೈ ಕೊಟ್ಟಿದ್ದರಿಂದ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



