Connect with us

Dvgsuddi Kannada | online news portal | Kannada news online

ಬರಪೀಡಿತ ಪ್ರದೇಶ ಘೋಷಣೆ, ನಿರಂತರ ವಿದ್ಯುತ್ ಪೂರೈಕೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಸೆ.25 ರಂದು ರಾಜ್ಯದಾದ್ಯಂತ ರೈತರ ಪ್ರತಿಭಟನೆ; ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

IMG 20230911 201326

ದಾವಣಗೆರೆ

ಬರಪೀಡಿತ ಪ್ರದೇಶ ಘೋಷಣೆ, ನಿರಂತರ ವಿದ್ಯುತ್ ಪೂರೈಕೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಸೆ.25 ರಂದು ರಾಜ್ಯದಾದ್ಯಂತ ರೈತರ ಪ್ರತಿಭಟನೆ; ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

ದಾವಣಗೆರೆ: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳ ಘೋಷಿಸಬೇಕು. ರೈತರ ಪಂಪ್ ಸೆಟ್ ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್ ಪೂರೈಸಬೇಕು. ಬ್ಯಾಂಕ್ ಗಳು ಸಾಲ ವಸೂಲಾತಿ ನಿಲ್ಲಿಸಬೇಕು‌ ಹಾಗೂ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಸೆ. 25 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ದಾವಣಗೆರೆ ಈ ಬಗ್ಗೆ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ, ಅಂದು ರೈತರು ಪ್ರತಿಭಟಿದಸಿ ಆಯಾ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವರು. ಈ ವರ್ಷ ತೀವ್ರ ಮಳೆ ಕೊರತೆ ಹಿನ್ನೆಲೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕರಾವಳಿ, ಮಲೆನಾಡು, ಅರೆ ಮಲೇನಾಡು, ಬಯಲು ಸೀಮೆಯಲ್ಲಿಯೂ ಮಳೆಯಾಗಿಲ್ಲ. ಸರ್ಕಾರ ಕೂಡಲೇ ಬರಗಾಲ ಘೋಷಿಸಿದರೆ ಕೇಂದ್ರ ಸರ್ಕಾರವು ಅಲ್ಪ ಸಹಾಯವನ್ನು ಮಾಡುತ್ತದೆ. ನಷ್ಟ ಅನುಭವಿಸಿದ ರೈತರಿಗೆ ಒಂದು ಎಕರೆಗೆ 25 ಸಾವಿರ ರೂಪಾಯಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿತ್ತು. ಈಗ ನಾಲ್ಕು ಗಂಟೆಯೂ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನಿರಂತರವಾಗಿ ವಿದ್ಯುಚ್ಛಕ್ತಿ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ. ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ನಿರ್ಧಾರ‌ ವಿರೋಧಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.

ಸಿಎಂ ಸಿದ್ದರಾಮಯ್ಯ ಸಾಲ ವಸೂಲಾತಿ ಮಾಡಬಾರದು ಎಂದು ಬ್ಯಾಂಕ್ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಬ್ಯಾಂಕ್ ಸಾಲ ವಸೂಲಾತಿಗೆ ರೈತರಿಗೆ ನೊಟೀಸ್ ನೀಡಿದ್ದಾರೆ. ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಇದರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top