ದಾವಣಗೆರೆ: ಆವರಗೊಳ್ಳ ಘನತ್ಯಾಜ್ಯ ಘಟಕದಲ್ಲಿ ಆಕಸ್ಮಿಕ ಬೆಂಕಿ; ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗರೆ: ದಾವಣಗೆರೆ ಮಹಾನಗರ ಪಾಲಿಕೆಯ ಅವರಗೊಳ್ಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮಗಳಿಗೆ ಸೂಚನೆ ನೀಡಿದರು.

ನೆಲಭರ್ತಿ ಜಾಗದಲ್ಲಿ ಸಂಗ್ರಹವಾಗುವ ಪಾರಂಪರಿಕ ತ್ಯಾಜ್ಯವನ್ನು ವಿಲೇಮಾಡಲು ಈಗಾಗಲೇ ಕಾರ್ಯಾದೇಶ ನೀಡಿದ್ದು ತುರ್ತಾಗಿ ಕೆಲಸ ಪ್ರಾರಂಭ ಮಾಡುವ ಮೂಲಕ ಮುಂದಿನ 6 ತಿಂಗಳಲ್ಲಿ ತ್ಯಾಜ್ಯ ಬೇರ್ಪಡಿಸುವ ಕೆಲಸ ಮುಕ್ತಾಯ ಮಾಡಲು ಸೂಚನೆ ನೀಡಿ ಘನತ್ಯಾಜ್ಯ ವಸ್ತುಗಳನ್ನು ಬೇರ್ಪಡಿಸುವುದರಿಂದ ಬೆಂಕಿ ಅವಘಡವನ್ನು ತಕ್ಷಣವೇ ತಡೆಗಟ್ಟಬಹುದಾಗಿದೆ. ಬೆಂಕಿ ಅವಘಡ ಸಂಭವಿಸಲು ಕಿಡಿಗೇಡಿಗಳು ಇಲ್ಲಿಗೆ ಅನಾವಶ್ಯಕವಾಗಿ ಬಾರದಂತೆ ಮತ್ತು ಇಂತಹ ಕಿಡಿಗೇಡಿಗಳ ಮೇಲೆ ನಿಗಾವಹಿಸಲು ಸಿಸಿ ಕ್ಯಾಮೆರಾಗಳನ್ನು ತುರ್ತಾಗಿ ಅಳವಡಿಸುವ ಜೊತೆಗೆ 24*7 ಕಾವಲುಗಾರರನ್ನು ನೇಮಕ ಮಾಡಲು ಸೂಚಿಸಿದರು.

ಬೆಂಕಿ ನಂದಿಸಲು ಸುತ್ತಲೂ ನೀರನ ಪೈಪ್‍ಲೈನ್ ಅಳವಡಿಕೆ ಮಾಡಿ ಅಗ್ನಿ ನಂದಕ ಪರಿಕರ ಅಳವಡಿಸಲು ಮತ್ತು ನೆಲಭರ್ತಿ ಜಾಗ ಇನ್ನೂ ಅವಶ್ಯಕತೆ ಇರುವುದರಿಂದ ಖರೀದಿ ಮಾಡಲು ಪ್ರಕ್ರಿಯೆ ಆರಂಭಿಸಲು ತಿಳಿಸಿ ಆಕಸ್ಮಿಕ ಅಗ್ನಿ ಅವಘಡಗಳನ್ನು ತಡೆಗಟ್ಟಲು ಕ್ರಿಯಾ ಯೋಜನೆ ತಯಾರು ಮಾಡಲು ಪಾಲಿಕೆ ಆಯುಕ್ತರಿಗೆ ಮತ್ತು ಅಗ್ನಿಶಾಮಕ ಮತ್ತು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ವೇಳೆ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *