ದಾವಣಗೆರೆ; ಆಕಸ್ಮಿಕ ಬೆಂಕಿ ತಗುಲಿ ಫಲಕ್ಕೆ ಬಂದಿದ್ದ 50 ಮಾವಿನ ಮರ ಸುಟ್ಟು ಭಸ್ಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ಟೆಹಳ್ಳಿ ಸಮೀಪದ ಮಾವಿನ ತೋಟವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಲಕ್ಕೆ ಬಂದ 50 ಗಿಡಗಳು ಸುಟ್ಟು ಭಸ್ಮವಾಗಿದ್ದು, 2 ಲಕ್ಷರೂ. ನಷ್ಟ ಸಂಭವಿಸಿದೆ.

ರೈತ ಮೊಹಮ್ಮದ್ ಜಬೀವುಲ್ಲಾ ಹಾಗೂ ಸಹೋದರಿಗೆ ಸೇರಿದ 2 ಎಕರೆ 17 ಗುಂಟೆ ಜಮೀನಿನಲ್ಲಿ 135 ಸಸಿಗಳನ್ನು ನಾಟಿ ಮಾಡಿದ್ದರು. 50ಕ್ಕೂ ಹೆಚ್ಚು ಮರ ಬೆಂಕಿಗೆ ಆಹುತಿಯಾಗಿವೆ. ಫಲಭರಿತ ಮಾವು ಕೈಗೆ ಸಿಗದಂತಾಗಿದೆ.‌ಕಳೆದ ವರ್ಷ 2.5 ಲಕ್ಷ ರೂ. ಆದಾಯ ಬಂದಿತ್ತು. ಈ ಸಲ ಬೆಂಕಿಯಿಂದ ಮರದ ಜೊತೆ ಸಮೃದ್ಧವಾಗಿದ್ದ ಫಸಲು ಸುಟ್ಟು ಸುಮಾರು 2 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ತೋಟಕ್ಕೆ ಭೇಟಿ ನೀಡಿ, ಪರಿಶೀಲಿಸಿ ಬೆಳೆ ಪರಿಹಾರ ನೀಡಬೇಕು ಎಂದು ರೈತ ಮೊಹಮ್ಮದ್ ಜಬೀವುಲ್ಲಾ ಆಗ್ರಹಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *