ದಾವಣಗೆರೆ: ಕಿಡಿಗೇಡಿಗಳ ಕೃತ್ಯಕ್ಕೆ 18‌ ಲೋಡ್ ಹುಲ್ಲಿನ ಬಣವೆ ಸುಟ್ಟು ಭಸ್ಮ…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಾನುವಾರು ಮೇವಿಗೆಂದು ರೈತರು ಸಂಗ್ರಹಿಸಿಟ್ಟಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ 18 ಲೋಡ್ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಹರೋಸಾಗರ‌ ಗ್ರಾಮದಲ್ಲಿ ನಡೆದಿದೆ.

ಹರೋಸಾಗರ ಗ್ರಾಮದ ರೈತರಾದ ಪರಮೇಶ್ವರಪ್ಪ, ರುದ್ರಪ್ಪ, ಬಸವರಾಜಪ್ಪ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಸುಮಾರು 18 ಲೋಡ್‌ಗೂ ಅಧಿಕ ಹುಲ್ಲಿನ ಬಣವೆಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಅಗ್ನಿಶಾಮಕ ದಳದ‌ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದರು.

ಸುಮಾರು 30 ಟ್ರ್ಯಾಕ್ಟರ್‌ಲೋಡ್‌ನಷ್ಟು ಹುಲ್ಲಿನ
ಬಣವೆಯನ್ನು ರೈತರು ಸಂಗ್ರಹಿಸಿಟ್ಟಿದ್ದರು. ಸ್ಥಳೀಯ ರೈತರ ಸಮಯ ಪ್ರಜ್ಞೆ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದರಿಂದ ಬಣವೆಗಳು ಉಳಿದಿವೆ. 18 ಲೋಡ್‌ನಷ್ಟು ಬಣವೆ ಮಾತ್ರ ಸುಟ್ಟು ಭಸ್ಮವಾಗಿವೆ. ಬರಗಾಲದಲ್ಲಿ ಭತ್ತದ ಬಣವೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *