Connect with us

Dvgsuddi Kannada | online news portal | Kannada news online

ದಾವಣಗೆರೆ: ಬಹುಮಹಡಿ ಕಟ್ಟಕ್ಕೆ ಬೆಂಕಿ; ಅಗ್ನಿ ನಂದಿಸಲು ಹರಸಾಹಸ; ಅಪಾರ ಪ್ರಮಾಣದ ಹಾನಿ

ದಾವಣಗೆರೆ

ದಾವಣಗೆರೆ: ಬಹುಮಹಡಿ ಕಟ್ಟಕ್ಕೆ ಬೆಂಕಿ; ಅಗ್ನಿ ನಂದಿಸಲು ಹರಸಾಹಸ; ಅಪಾರ ಪ್ರಮಾಣದ ಹಾನಿ

ದಾವಣಗೆರೆ: ಶಾಮನೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ನಿನ್ನೆ ( ಫೆ‌.4) ತಡ ರಾತ್ರಿ  ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

ಶಾಮನೂರು ರಸ್ತೆಯ ಕಾಸೆಲ್ ಅರ್ಕೆಡ್‌ನ ಅನಿಮೇಶನ್ ಅಂಡ್ ಸ್ಟೋಕ‌ ಜೋನ್‌ನ ಬಹುಮಹಡಿ ಕಟ್ಟದಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.‌ ನೋಡ ನೋಡುತ್ತಲೇ ಇಡೀ ದಟ್ಟ ಹೊಗೆ ಇದೇ ಕಟ್ಟಡ ಆವರಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಜೋನ್‌ನಲ್ಲಿದ್ದ ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟ ಹೋಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ಸ್ಥಳೀಯರು‌ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ 2 ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸಿಬ್ಬಂದಿಗಳು ಜೋನ್‌ ಬಾಗಿಲು ಹಾಕಿಕೊಂಡು ಹೋಗಿದ್ದರಿಂದ, ಗಾಜುಗಳನ್ನು ಒಡೆದು ಒಳ ಪ್ರವೇಶ ಮಾಡಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆ ನಡೆಸುವಾಗ ಅಗ್ನಿ ಶಾಮಕ ವಾಹನದಲ್ಲಿ ನೀರು ಖಾಲಿಯಾಗಿ ಸಮಸ್ಯೆ ಎದುರಾಗಿತ್ತು. ನಂತರ ಮಹಾನಗರ ಪಾಲಿಕೆಯ ಟ್ಯಾಂಕರ್‌ನಿಂದ ನೀರು ತರಿಸಿಕೊಂಡು ಅಗ್ನಿನಂದಕ ವಾಹನಕ್ಕೆ ನೀರು ತುಂಬಿಸಿ ಕಾರ್ಯಾಚರಣೆ ನಡೆಸಲಾಯಿತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top