Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕೀಟ್; ನೋಡ ನೋಡುತ್ತಿದ್ದಂತೆ 20 ಎಕರೆಗೂ ಹೆಚ್ಚು ಕಬ್ಬು ಬೆಂಕಿಗೆ ಆಹುತಿ..!

images 8 18

ದಾವಣಗೆರೆ

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕೀಟ್; ನೋಡ ನೋಡುತ್ತಿದ್ದಂತೆ 20 ಎಕರೆಗೂ ಹೆಚ್ಚು ಕಬ್ಬು ಬೆಂಕಿಗೆ ಆಹುತಿ..!

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ನೋಡ ನೋಡುತ್ತಿದ್ದಂತೆ 20 ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.

ತಾಲ್ಲೂಕಿನ ಕೊಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ನಂದಿಸಲು ಪ್ರಯತ್ನಿಸಿದರು. ಅಗ್ನಿ ಶಾಮಕ ದಳದ ಸಿಬ್ಬಂದಿ ಬರುವವರೆಗೆ ಅರ್ಧದಷ್ಟು ಕಬ್ಬು ಬೆಂಕಿಗೆ ನಾಶವಾಗಿದೆ.

ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಬಿದ್ದಿದೆ. ಬೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್‌ ತಂತಿಗಳು ಜೋತು ಬಿದ್ದ ಬಗ್ಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ವಿದ್ಯುತ್ ತಂತಿಗಳ ನಿರ್ವಹಣೆ ಸರಿಯಿಲ್ಲ. ಆಗಾಗ ವಿದ್ಯುತ್ ಶಾರ್ಟ್ ಸರ್ಕೀಟ್‌ ಆಗುತ್ತಿದೆ. ಇದರಿಂದ ತೆಂಗು, ಅಡಿಕೆಗೂ ಹಾನಿಯಾಗುತ್ತಿದೆ. ಹದಡಿ ಮತ್ತು ಆರನೇ ಕಲ್ಲು ಗ್ರಾಮದ ಸುತ್ತಲೂ ಕಬ್ಬಿನ ಬೆಳೆಗೆ ಬೆಂಕಿಗೆ ಆಹುತಿಯಾಗಿದೆ.

ಕಬ್ಬಿನ ಬೆಳೆಯನ್ನು ಫಸಲ್‌ ಬಿಮಾ ವ್ಯಾಪ್ತಿಗೆ ತರಬೇಕು. ಬೆಂಕಿ ಅವಘಡ ಸಂಭಿಸಿದಾಗ ನಷ್ಟಕ್ಕೆ ಬೆಸ್ಕಾಂ ಹಾಗೂ ಸಕ್ಕರೆ ಕಾರ್ಖಾನೆ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top