ದಾವಣಗೆರೆ: ಬೆಂಕಿ ಅವಘಡ; 2.50 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ 2.50 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಮಾಯಕೊಂಡ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಂದ್ರಶೇಖರಪ್ಪ ಎಂಬುವರಿಗೆ ಸೇರಿದ ಮಕ್ಕೆಜೋಳ ಸುಟ್ಟು ಹೋಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕೊಯ್ಲು ಮಾಡಿ, ಕಣದಲ್ಲಿ ರಾಶಿ ಹಾಕಿದ್ದರು. ಯಾರು ಕಿಡಿಗೇಡಿಗಳು ತಡ ರಾತ್ರಿ ಬೆಂಕಿ ಹಚ್ಚಿದ ಶಂಕೆ ವ್ಯಕ್ತವಾಗಿದೆ. ಈ ಬಾರಿ ಭಾರೀ ಮಳೆಯಿಂದ ಅತಿ ತೇವಾಂಶದಿಂದ ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾಗಿದೆ. ಈ ಸಲ ಮಕ್ಕೆಜೋಳಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ. ಚಂದ್ರಶೇಖರಪ್ಪ ಅವರ 2.50 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಹೋಗಿದ್ದರಿಂದ ನಷ್ಟ ಅನುಭವಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *