ದಾವಣಗೆರೆ: ಮೀನುಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಕೃಷಿ ಕೊಳಗಳ ನಿರ್ಮಾಣ, ಸಿಹಿನೀರು ಬಯೋಫ್ಲಾಕ್ ಘಟಕ ಸ್ಥಾಪನೆಗೆ ಸಹಾಯಧನ, ಮೀನುಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ ಸಹಾಯ, ಬೃಹತ್ ಆರ್.ಎ.ಎಸ್. ಘಟಕ, ಮಧ್ಯಮ ಆರ್.ಎ.ಎಸ್ ಘಟಕ, ಸಣ್ಣ ಆರ್.ಎ.ಎಸ್ ಘಟಕ, ಮೋಟಾರ್ ಸೈಕಲ್ ವಿತ್ ಐಸ್ ಬಾಕ್ಸ್ ಖರೀದಿಗೆ ಸಹಾಯಧನ, ತ್ರಿ-ಚಕ್ರ ವಾಹನ ವಿತ್ ಐಸ್ ಬಾಕ್ಸ್ ಖರೀದಿಗೆ ಸಹಾಯಧನ, ಮೀನು ಮಾರಾಟ ಮಳಿಗೆ (ಕಿಯೋಸ್ಕ್) ಜೊತೆಗೆ ಅಲಂಕಾರಿಕಾ ಮೀನುಗಳ ಘಟಕಗಳ ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40 ರಷ್ಟು, ಪರಿಶಿಷ್ಟ ಜಾತಿ ಹಾಗೂ ಪಂಗಡ ಅಥವಾ ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



