ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ಇವರು ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಡಿ.9 ರಿಂದ 19 ರವರೆಗೆ ನಗರದ ಶ್ರೀರಾಮನಗರ ಗಾಂಧಿ ಭವನದಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ (ಬಸ್ಸು ನಂ-103) ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-7406323294 ಯನ್ನು ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.



