ದಾವಣಗೆರೆ: ನಿರಾಶ್ರಿತರಿಗೆ ಆತ್ಮಸ್ಥೈರ್ಯ ತುಂಬಲು ಸಖತ್ ಡ್ಯಾನ್ಸ್ ಮಾಡಿದ ತಹಶೀಲ್ದಾರ್ ಗಿರೀಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುಲದಲ್ಲಿ‌ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ದಾವಣಗೆರೆ ತಹಶೀಲ್ದಾರ್ ಗಿರೀಶ್ ಸಖತ್ ಡ್ಯಾನ್ಸ್ ಮಾಡಿದ್ದಾರೆ. ತಾಲೂಕಿನ ತುರ್ಚಘಟ್ಟದ  ನಿರಾಶ್ರಿತರ ಪರಿಹಾರ ಕೇಂದ್ರದ ಗಣಪತಿ ವಿಸರ್ಜನೆ ವೇಳೆ ನಿರಾಶ್ರಿತರ ಆತ್ಮಸ್ಥೈರ್ಯ ತುಂಬಲು ತಹಶೀಲ್ದಾರ್ ಈ  ನೃತ್ಯ ಮಾಡಿದ್ದಾರೆ.

ಮೂರು ದಿನಗಳ ಕಾಲ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಸರ್ಜನೆ ಮಾಡಿದ್ದು, ಈ ವೇಳೆ ತಹಶೀಲ್ದಾರ್  ನಿರಾಶ್ರಿತರು, ಸಿಬ್ಬಂದಿಗಳು ಕೂಡ ನೃತ್ಯ ಮಾಡಿದ್ದಾರೆ. ನಿರಾಶ್ರಿತರೊಂದಿಗೆ ಮುಕ್ತವಾಗಿ ಬೇರೆತು ಗಣಪತಿ ಹಬ್ಬವನ್ನು ಆಚರಿಸಿದ್ದಾರೆ.

ಭಿಕ್ಷಕರು,  ಅನಾಥರು ಹಾಗೂ ನಿರಾಶ್ರಿತರು ಈ ಕೇಂದ್ರದಲ್ಲಿದ್ದು, ಅವರ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಗಣಪತಿ ವಿಸರ್ಜನೆ ಹಿನ್ನೆಲೆ ಹಲವು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನಿರಾಶ್ರಿತರ ಜೊತೆ ಹಾಡಿಗೆ ಕುಣಿದು ತಹಶೀಲ್ದಾರ್ ಸಂಭ್ರಮಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *