ಹರಪನಹಳ್ಳಿ: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸಾಮಗ್ರಿ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಪನಹಳ್ಳಿ: ಗಂಗಾ ಕಲ್ಯಾಣ ಯೋಜನೆಯಡಿ ಆದಿಜಾಂಬವ ನಿಗಮದಿಂದ 23, ಅಂಬೇಡ್ಕರ್ ನಿಗಮದಿಂದ 4 ಫಲಾನುಭವಿಗಳಿಗೆ 2018-19ನೇ ಸಾಲಿನ ಒಟ್ಟು 23 .5 ಲಕ್ಷ ಸಹಾಯಧನದಲ್ಲಿ ಕೊಳವೆ ಬಾವಿಯ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಶಾಸಕ ಜಿ.ಕರುಣಾಕರ ರೆಡ್ಡಿ ಪಟ್ಟಣದ ಬಾಬು ಜಗಜೀವನರಾಂ ಭವನದ ಆವರಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿ ಸಾಮಗ್ರಿಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಕೊಳವೆಬಾವಿ, ಮೋಟರ್ ಪಂಪ್‌ ಸೆಟ್, ವಿದ್ಯುತ್ ಸಂಪರ್ಕವನ್ನು ಈ ಯೋಜನೆಯಲ್ಲಿ ಫಲಾನುಭವಿಗೆ 23.5 ಲಕ್ಷ ನೀಡಲಾಗುತ್ತಿದ್ದು, ಒಂದು ವೇಳೆ ಆಳದಲ್ಲಿ ನೀರು ದೊರೆತು ಹೆಚ್ಚಿನ ಹಣ ಖರ್ಚು ಆದಲ್ಲಿ ಫಲಾನುಭವಿಗಳಿಗೆ ನಿಗಮದಿಂದ ಸಾಲವನ್ನು ಸಹಾಯಧನ ಅಡಿಯಲ್ಲಿ ನೀಡಲಾಗುವುದು ಎಂದರು.

ಬಿಜೆಪಿ ಮುಖಂಡರಾದ ಕಣಿವಿಹಳ್ಳಿ ಮಂಜುನಾಥ, ಆರ್, ಲೋಕೇಶ್‌, ಎಂ. ಮಲ್ಲೇಶ್, ನಾಗರಾಜ, ಸೇರಿದಂತೆ ಇತರರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *