Connect with us

Dvgsuddi Kannada | online news portal | Kannada news online

ದಾವಣಗೆರೆ: ಅನಧಿಕೃತವಾಗಿ ಗ್ಯಾಸ್ ರಿಫೀಲ್ ಮಾಡುವಾಗ ಓಮಿನಿ ಕಾರು ಬ್ಲಾಸ್ಟ್ ; ಆತಂಕಗೊಂಡ ಜನ

ದಾವಣಗೆರೆ

ದಾವಣಗೆರೆ: ಅನಧಿಕೃತವಾಗಿ ಗ್ಯಾಸ್ ರಿಫೀಲ್ ಮಾಡುವಾಗ ಓಮಿನಿ ಕಾರು ಬ್ಲಾಸ್ಟ್ ; ಆತಂಕಗೊಂಡ ಜನ

ದಾವಣಗೆರೆ: ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಓಮಿನಿ ಕಾರು ಬ್ಲಾಸ್ಟ್ ಆದ ಘಟನೆ ದಾವಣಗೆರೆ ಹೊರ ವಲಯದ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ. ಭಾರೀ ಶಬ್ದಕ್ಕೆ ಜನರು ಆತಂಕಗೊಂಡು ಮನೆಯಿಂದ ಹೊರ ಬಂದ ಘಟನೆ ನಡೆದಿದೆ.

ಈ ಪ್ರದೇಶ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ಅನಧಿಕೃತವಾಗಿ ಕೆಲ ದಿನಗಳಿಂದ ಓಮಿನಿ ಹಾಗೂ ಆಟೋಗಳಿಗೆ ಎಲ್​ಪಿಜಿ ಗ್ಯಾಸ್ ತುಂಬಲಾಗುತ್ತಿತ್ತು. ಈಗ ಸಿಲಿಂಡರ್​ನಲ್ಲಿ ಲೀಕೇಜ್ ಆಗಿ ಭಾರಿ ಸ್ಫೋಟ ಸಂಭವಿಸಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಬಾಂಬ್ ರೀತಿ ಓಮಿನಿ ಕಾರು ಸಿಡಿದಿದೆ. ಸ್ಫೋಟದ ದೃಶ್ಯವನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಘಟನೆ ಗಾಂಧಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top