ದಾವಣಗೆರೆ: ಗಾಜಿನ ಮನೆಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ರಸದೌತಣ ಕಣ್ತುಂಬಿಕೊಳ್ಳಿ ಬನ್ನಿ -ಜಿಲ್ಲಾಧಿಕಾರಿ ಡಾ; ವೆಂಕಟೇಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕುಂದುವಾಡ ಕೆರೆಬಳಿಯ ಗಾಜಿನ ಮನೆಯಲ್ಲಿ ನವೆಂಬರ್ 13 ರಿಂದ 16 ರ ವರೆಗೆ ಫಲಪುಷ್ಪ ಪ್ರದರ್ಶನದ ಜೊತೆಗೆ ಸಂಗೀತ ಕಾರಂಜಿ, ಲೇಜರ್ ಶೋ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಗಾಜಿನ ಮನೆಯಲ್ಲಿ ಏರ್ಪಡಿಸಲಾದ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯ ವೈವಿಧ್ಯತೆಯನ್ನು ಸಾರ್ವಜನಿಕರಿಗೆ ತೋರ್ಪಡಿಸುವ ಉದ್ದೇಶದಿಂದ ದೀಪಾವಳಿ ಸಂದರ್ಭದಲ್ಲಿ ಫಲಪುಷ್ಪ ಪ್ರದರ್ಶನವನ್ನು ಬಹಳ ಅರ್ಥಪೂರ್ಣವಾಗಿ ಮತ್ತು ಸೊಗಸಾಗಿ ಏರ್ಪಡಿಸಲಾಗಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಇಸ್ರೋ ಉಡಾವಣೆಗೊಳಿಸಿದ ಚಂದ್ರಯಾನ-3 ಜಿಲ್ಲೆಯ ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ರೈತರು ಬೆಳೆದ ಹೂವುಗಳು, ಹಣ್ಣುಗಳನ್ನು ತಂದು ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ನಗರದ ದೃಶ್ಯಮಾಧ್ಯಮ ಮಹಾವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವಂತಹ ಕಲಾಕೃತಿಗಳನ್ನು ಸಾರ್ವಜನಿಕರಿಗೆ ತೋರ್ಪಡಿಸುವ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಕಲಾ ರಸಿಕರ ಕಣ್ಮನಸೆಳೆಯುವಲ್ಲಿ ಯಶಸ್ವಿಯಾಗಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕೆಂದು ತಿಳಿಸಿದರು.

ಮಹಾನಗರ ಪಾಲಿಕೆ ಮಹಾಪೌರರಾದ ವಿನಾಯಕ ಬಿ.ಹೆಚ್, ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ರೇಖಾ ಸುರೇಶ್, ಮೀನಾಕ್ಷಿ ಜಗದೀಶ್, ಅಪರ ಜಿಲ್ಲಾಧಿಕಾರಿ ಪಿಎನ್ ಲೋಕೇಶ್, ಪಾಲಿಕೆ ಆಯುಕ್ತೆ ರೇಣುಕಾ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಜಿ.ಸಿ ರಾಘವೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ಹೂವಿನಲ್ಲಿ ಅರಳಿದ ಚಂದ್ರಯಾನ-3; ಗಾಜಿನಮನೆಯಲ್ಲಿ ಏರ್ಪಡಿಸಲಾದ ಫಲಪುಷ್ಪ ಪ್ರದರ್ಶನದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಭಿವೃದ್ದಿಪಡಿಸಿದ ಚಂದ್ರಯಾನ-3 ಪಿಎಸ್‍ಎಲ್‍ವಿ ಪಾಪುಲೇಷನ್ ಮಾದರಿ, ವಿಕ್ರಂ ಲ್ಯಾಂಡರ್, ಪ್ರಗ್ನ್ಯಾನ್ ರೋವರ್‍ಗಳನ್ನು ಹೂವಿನಲ್ಲಿ ಬಿಡಿಸಲಾಗಿದೆ.
ವಿಶ್ವಕಪ್; ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್, ಭಾರತ ಭೂಪಟ, ಭಾರತ ಆಟಗಾರರು, ಕಪ್ ಚಿತ್ರಣವು ಹೂವಿನಲ್ಲಿ ಅರಳಿಸಲಾಗಿದೆ.

ಕರ್ನಾಟಕ ಸುವರ್ಣ ಸಂಭ್ರಮ-50; ದಾವಣಗೆರೆ ವಿಶ್ವವಿದ್ಯಾನಿಲಯದ ದೃಶ್ಯಕಲಾ‌ಮಹಾವಿದ್ಯಾಲಯದಿಂದ ಕರ್ನಾಟಕ ಸುವರ್ಣ ಸಂಭ್ರಮಕ್ಕೆ ಸಂಬಂಧಿಸಿದ ಚಿತ್ರಗಳ ಪ್ರದರ್ಶನ, ಕರ್ನಾಟಕದ ಇತಿಹಾಸ, ಏಕೀಕರಣ, ಕಲೆ, ವಾಸ್ತುಶಿಲ್ಪ ಇದರಲ್ಲಿ ನೋಡಬಹುದಾಗಿದೆ.

ಶಿವನಂದಿ; 16 ಅಡಿ ಎತ್ತರ ಮತ್ತು 10 ಅಡಿ ಅಗಲದ ಶಿವನಂದಿಯ ಕಲಾಕೃತಿ ಸ್ಥಾಪಿಸಲಾಗಿದೆ. ಮತ್ತು ಡಾ; ಶಿವಕುಮಾರಸ್ವಾಮೀಜಿಯವರ ಪುಥ್ಥಳಿ ಸೇರಿದಂತೆ ಆಕರ್ಷಿಣೀಯವಾದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಕಾರಂಜಿ, ಲೇಜರ್ ಶೋ; ಸಂಗೀತ ಕಾರಂಜಿಯ ಜೊತೆಗೆ ಲೇಜರ್ ಶೋ ಮೂಲಕ ಕನ್ನಡನಾಡಿದ ಸಾಹಿತ್ಯ, ಇತಿಹಾಸ, ಕವಿಗಳು, ಪುನಿತ್‍ರಾಜ್‍ಕುಮಾರ್ ಅವರ ಬೊಂಬೇ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ ಹಾಡಿನ ಸಂಯೋಜನೆ ಭಾವನಾಲೋಕಕ್ಕೆ ಕರೆದೊಯ್ಯುವಂತಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *