Connect with us

Dvgsuddi Kannada | online news portal | Kannada news online

ದಾವಣಗೆರೆ: GMIT ಎಂಬಿಎ ವಿಭಾಗದ 35 ವಿದ್ಯಾರ್ಥಿಗಳು ICICI ಬ್ಯಾಂಕ್ ಸಂದರ್ಶನದಲ್ಲಿ ಆಯ್ಕೆ

IMG 20230125 WA0040

ದಾವಣಗೆರೆ

ದಾವಣಗೆರೆ: GMIT ಎಂಬಿಎ ವಿಭಾಗದ 35 ವಿದ್ಯಾರ್ಥಿಗಳು ICICI ಬ್ಯಾಂಕ್ ಸಂದರ್ಶನದಲ್ಲಿ ಆಯ್ಕೆ

ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ 35 ವಿದ್ಯಾರ್ಥಿಗಳು ಐಸಿಐಸಿಐ ಬ್ಯಾಂಕ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂ ಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಸಿಐಸಿಐ ಬ್ಯಾಂಕಿನ ವತಿಯಿಂದ ಸಂದರ್ಶನ ಪ್ರಕ್ರಿಯೆ ನಡೆಸಲು ನುರಿತ ಸಂಪನ್ಮೂಲ ವ್ಯಕ್ತಿಗಳ ತಂಡ ಭೇಟಿ ನೀಡಿ ಸಂದರ್ಶನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಆಯ್ಕೆಯಾದ ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದರು.

ಬೆಳಗ್ಗೆಯಿಂದ ನಡೆದ ವಿವಿಧ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹ ವಿದ್ಯಾರ್ಥಿಗಳು ಭಾಗವಹಿಸಿ, ಕೊನೆಗೆ 35 ವಿದ್ಯಾರ್ಥಿಗಳು ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 2 ಸ್ಥಾನಕ್ಕೆ, ವಾರ್ಷಿಕ 3.83 ಲಕ್ಷ ರೂಗಳ ವೇತನ ಶ್ರೇಣಿಯೊಂದಿಗೆ ಆಯ್ಕೆಯಾಗಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.

ಎಂಬಿಎ ವಿದ್ಯಾರ್ಥಿಗಳಿಗೆ ಇನ್ನೂ ಹಲವು ಕಂಪನಿಗಳು ಮುಂದಿನ ದಿನಗಳಲ್ಲಿ ಸಂದರ್ಶನ ಪ್ರಕ್ರಿಯೆ ನಡೆಸಲಿದ್ದು, ಎಲ್ಲಾ ಅರ್ಹ ವಿದ್ಯಾರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ ಪ್ರಶಾಂತ ಕುಮಾರ್ ಓ ತಿಳಿಸಿದರು.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿಗಳಾದ ಶ್ರೀ ವೈ ಯು ಸುಭಾಷ್ ಚಂದ್ರ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಬಿ, ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top