Connect with us

Dvgsuddi Kannada | online news portal | Kannada news online

ದಾವಣಗೆರೆ; ಪ್ರಸಕ್ತ ವರ್ಷದಲ್ಲಿ GMIT 303 ವಿದ್ಯಾರ್ಥಿಗಳಿಗೆ ಜಾಬ್ ಆಫರ್ಸ್

gmit

ದಾವಣಗೆರೆ

ದಾವಣಗೆರೆ; ಪ್ರಸಕ್ತ ವರ್ಷದಲ್ಲಿ GMIT 303 ವಿದ್ಯಾರ್ಥಿಗಳಿಗೆ ಜಾಬ್ ಆಫರ್ಸ್

ದಾವಣಗೆರೆ; ಪ್ರತಿಷ್ಠಿತ ಕಂಪನಿಗಳು ಆರ್ಥಿಕ ಹಿಂಜರಿತ ಎದುರಿಸುತ್ತಿವೆ. ಸುಮಾರು 91 ಕಂಪನಿಗಳು ಜನವರಿ ತಿಂಗಳ ಮೊದಲ 15 ದಿನಗಳಲ್ಲಿ 24,000ಕ್ಕೂ ಹೆಚ್ಚು ಟೆಕ್ಕಿಗಳನ್ನು ವಜಾಗೊಳಿಸಿದ್ದು,ದಿನಕ್ಕೆ ಸರಾಸರಿ 1,600ರಂತೆ ಉದ್ಯೋಗಿಗಳನ್ನು ವಜಾ ಮಾಡುತ್ತಿವೆ ಎಂದು ಅಂಕಿ-ಅಂಶಗಳಿಂದ ಗೊತ್ತಾಗಿದೆ. ಇಂತಹ ಆರ್ಥಿಕ ಹಿಂಜರಿತದಿಂದಲೂ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿದ್ದು, ಪ್ರಸಕ್ತ ವರ್ಷದ 2023 ರ ಸಾಲಿನ 303 ಜಾಬ್ ಆಫರ್ಸ್ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ತಾಂತ್ರಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ, ತಾಂತ್ರಿಕ ಗುಣಮಟ್ಟ, ವರ್ತನೆ, ನಡವಳಿಕೆ ಮತ್ತು ಇತ್ತೀಚಿನ ತಂತ್ರಜ್ಞಾನಗಳ ತಿಳುವಳಿಕೆ ಆಯ್ಕೆ ಪ್ರಕ್ರಿಯೆಯಲ್ಲಿ ಮಾನದಂಡಗಳಾಗುತ್ತವೆ ಎಂದು ತಿಳಿಸಿದರು.

ಆರ್ಥಿಕ ಹಿಂಜರಿತದಿಂದ ಹಲವು ಕಂಪನಿಗಳ ಸಂದರ್ಶನ ಪ್ರಕ್ರಿಯೆಯು ವಿಳಂಬವಾಗಲಿದ್ದು ಅಥವಾ ಕಡಿಮೆ ಪ್ರಮಾಣದ ಆಯ್ಕೆಗಳು ನಡೆಯಲಿದ್ದು ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಆತ್ಮವಿಶ್ವಾಸದಿಂದ ಇರುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆಕೊಟ್ಟರು.

ಈಗಾಗಲೇ ಎಸ್ ಎಲ್ ಕೆ ಸಾಫ್ಟ್ವೇರ್ ಸರ್ವಿಸಸ್, ಟೆಕ್ ಮಹಿಂದ್ರ, ಎಕ್ಸಾವೇರ್ ಟೆಕ್ನಾಲಜಿಸ್, ರೋಬೋ ಸಾಫ್ಟ್ ಟೆಕ್ನಾಲಜೀಸ್, ಕ್ವಾಲಿಟೆಸ್ಟ್, ಟಿಸಿಎಸ್, ವಿಲೇ ಎಡ್ಜ್, ಇಂಟೆಲಿಪಾತ್ ಸಾಫ್ಟ್ವೇರ್, ಒಡೆಸ್ಸಾ, ಮೆಡಿ ಅನಲೈಟಿಕ, ಸ್ಮಾರ್ಟ್ ಸಾಕ್ಸ್ , ಆಫ್ಟಂ, ಸ್ಕಿಲ್ ಒರಟೆಕ್ಸ್ , ಒಜಿ ಹೆಲ್ತ್ ಕೇರ್ ಮುಂತಾದವುಗಳು ಸಂದರ್ಶನ ಪ್ರಕ್ರಿಯೆಯನ್ನು ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಂಪನಿಗಳಾದ ಐಸಿಐಸಿಐ ಬ್ಯಾಂಕ್, ರಾಂಕೋ ಸಿಮೆಂಟ್ಸ್, ಐಬಿಎಂ, ಸಿಕ್ಸ್ ಡಿ ಟೆಕ್ನಾಲಜೀಸ್, ಕಿರ್ಲೋಸ್ಕರ್, ಮಹಿಂದ್ರ ಸಿ ಐ ಈ, ಹಿಟಾಚಿ, ಟೊಯೋಟಾ ಕಿರ್ಲೋಸ್ಕರ್ ಟೆಕ್ಸ್ಟೈಲ್, ಎಸಿಸಿ ಸಿಮೆಂಟ್ಸ್, ಎಪಿಸೋರ್ಸ್, ಒಮೆಗಾ ಹೆಲ್ತ್ ಕೇರ್, ಕೋಟಕ್ ಮಹೇಂದ್ರ ಬ್ಯಾಂಕ್, ಡಿ ಮಾರ್ಟ್, ಇನ್ನು ಅನೇಕ ಕಂಪನಿಗಳು ಸಂದರ್ಶನ ಪ್ರಕ್ರಿಯೆಯನ್ನು ನಡೆಸಲಿದ್ದು ಹಲವು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top