ದಾವಣಗೆರೆ GMIT: ನಾಳೆ ಮಲ್ಲಿಕಾ-22:ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು. 22 ಮತ್ತು 23 ಜುಲೈ 2022 ರಂದು ಕಾಲೇಜಿನ ವಾರ್ಷಿಕ ಸಮಾರಂಭವಾದ ಮಲ್ಲಿಕಾ-22 ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವನ್ನು ಬಹಳ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶುಕ್ರವಾರದಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು 9:00 ರಿಂದ ನಡೆಯಲಿದ್ದು, ಸಾಯಂಕಾಲ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ ಸದಸ್ಯರಾದ ಶ್ರೀ ಜಿಎಸ್ ಅನಿತ್ ಕುಮಾರ್ ಕುಮಾರ್ ಉಪಸ್ಥಿತರಿರುವರು ಎಂದು ಇದೇ ವೇಳೆ ತಿಳಿಸಿದರು.

23ನೇ ಶನಿವಾರದಂದು ನಡೆಯುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಸಂಸದರಾದ ಡಾ ಜಿಎಂ ಸಿದ್ದೇಶ್ವರ, ಹೆಸರಾಂತ ಸ್ಯಾಕ್ಸೋಫೋನ್ ವಾದಕ ವಿದ್ವಾನ್ ಶ್ರೀಧರ್ ಸಾಗರ್, ಜಿ ಸರಿಗಮಪ ರಿಯಾಲಿಟಿ ಶೋ ಕಾರ್ಯಕ್ರಮದ ಸ್ಪರ್ಧಿಗಳಾಗಿದ್ದ ಕುಮಾರಿ ವರ್ಣ ಚೌಹಾನ್, ಕುಮಾರಿ ನೇಹಾ ಶಾಸ್ತ್ರಿ ಮತ್ತು ಅಶ್ವಿನ್ ಶರ್ಮ ಭಾಗವಹಿಸಲಿದ್ದಾರೆ ಮತ್ತು ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನವನ್ನು ಶನಿವಾರದ ಸಂಜೆಯ ಕಾರ್ಯಕ್ರಮದಲ್ಲಿ ನೆರವೇರಿಸಲಾಗುವುದು ಮತ್ತು 12 ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳು ಬಂಗಾರದ ಪದಕವನ್ನು ಮತ್ತು 26 ವಿದ್ಯಾರ್ಥಿಗಳು ಬೆಳ್ಳಿಯ ಪದಕವನ್ನು ಸ್ವೀಕರಿಸಲಿದ್ದಾರೆ ಹಾಗೂ ಪಿಹೆಚ್ ಡಿ ಪಡೆದ ಪ್ರಾಧ್ಯಾಪಕರು ಗಳಿಗೆ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಡಾ ಸುನಿಲ್ ಕುಮಾರ್ ಬಿ ಎಸ್ ತಿಳಿಸಿದರು.

ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮಗಳು, ಜಿ ಸರಿಗಮಪ ಸ್ಪರ್ಧಿಗಳಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಮತ್ತು ವಿದ್ವಾನ್ ಶ್ರೀಧರ್ ಸಾಗರ್ ರವರಿಂದ ಲೈವ್ ಕನ್ಸರ್ಟ್ ಕಾರ್ಯಕ್ರಮಗಳು ನಡೆಯಲಿವೆ ಎಂದು ಇದೇವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ಇನ್ಫಾರ್ಮಶನ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ಮಲ್ಲಿಕಾ ಕಾರ್ಯಕ್ರಮದ ಸಂಯೋಜಕರಾದ ಡಾ ಬಿ ಎಸ್ ಸುನಿಲ್ ಕುಮಾರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿಆರ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *