ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿನಿಗೆ ಪೇಪಾಲ್ ಕಂಪನಿ 34.4 ಲಕ್ಷ ವೇತನ ಆಫರ್..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ 2024ನೇ ಸಾಲಿನ ವಿದ್ಯಾರ್ಥಿನಿ ಕುಮಾರಿ ಷಷ್ಠಿ ಡಿಬಿ, ಇತ್ತೀಚಿಗೆ ನಡೆದ ಪೇಪಾಲ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿದ್ದಾರೆ‌. ಅವರಿಗೆ ಕಂಪನಿಯು ವರ್ಷಕ್ಕೆ 34.4 ಲಕ್ಷಗಳ ಆಫರ್ ನೀಡಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪೇಪಾಲ್ ಕಂಪನಿ ಕ್ಯಾಂಪಸ್ ಸಂದರ್ಶನ
  • ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ  ವಿದ್ಯಾರ್ಥಿನಿ ಕುಮಾರಿ ಷಷ್ಠಿ ಡಿಬಿ ಆಯ್ಕೆ
  • ವರ್ಷಕ್ಕೆ 34.4 ಲಕ್ಷಗಳ ಆಫರ್
  • ಚೆನ್ನೈನ ಪೇಪಾಲ್ ಕಂಪನಿಗೆ

ಕುಮಾರಿ ಷಷ್ಠಿ ಡಿಬಿ ಮೊದಲಿನಿಂದಲೂ ವಿದ್ಯಾಭ್ಯಾಸದಲ್ಲಿ ಒಳ್ಳೆಯ ಅಂಕಗಳನ್ನು ಗಳಿಸುತ್ತಾ, ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿದ್ದಾರೆ. ಹ್ಯಾಕಥಾನ್ ಸ್ಪರ್ಧೆಯಲ್ಲೂ ಸಹ ಅನೇಕ ಬಾರಿ ಭಾಗವಹಿಸಿ ತಾಂತ್ರಿಕ ಗುಣಮಟ್ಟವನ್ನು ಹೆಚ್ಚಿಸಿಕೊಂಡಿದ್ದರು. ಇತ್ತೀಚಿಗೆ ಪೇಪಾಲ್ ನಡೆಸಿದ ಎಲ್ಲಾ ಮೂರು ತಾಂತ್ರಿಕ ಸಂದರ್ಶನ ಸುತ್ತುಗಳಲ್ಲೂ ತಾಂತ್ರಿಕ ಕೌಶಲ್ಯ ಪ್ರದರ್ಶಿಸಿ ಆಯ್ಕೆಯಾದ ವಿದ್ಯಾರ್ಥಿನಿಯಾಗಿದ್ದಾರೆ.

ಕಂಪನಿಯು ಈ ವಿದ್ಯಾರ್ಥಿನಿಗೆ ಇದೇ ಅಕ್ಟೋಬರ್ 21ನೇ ಸೋಮವಾರದಂದು ಚೆನ್ನೈನ ಪೇಪಾಲ್ ಕಂಪನಿಗೆ ಬಂದು ಸೇರಲು ಸೂಚನೆಯನ್ನು ನೀಡಿತ್ತು. ಅದೇ ರೀತಿ ವಿದ್ಯಾರ್ಥಿನಿಯು ಯಶಸ್ವಿಯಾಗಿ ಎಲ್ಲಾ ಔಪಚಾರಿಕ ಪ್ರಕ್ರಿಯೆಯನ್ನು ಮುಗಿಸಿ, ಇಂದು ಕಂಪನಿಯಲ್ಲಿ ತಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯ ಮತ್ತು ಜಿಎಂ ವಿಶ್ವವಿದ್ಯಾಲಯದ ಪರವಾಗಿ ಕುಮಾರಿ ಷಷ್ಠಿ ಡಿಬಿ ಮತ್ತು ಅವರ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸುತಿದ್ದೇವೆ.

ಕಾಲೇಜಿನ ಚೇರ್ಮನ ಮತ್ತು ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಜಿಎಂ ಲಿಂಗರಾಜು, ಜಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ ಎಸ್ ಆರ್ ಶಂಕಪಾಲ್, ಉಪಕುಲಪತಿ ಡಾ ಹೆಚ್ ಡಿ ಮಹೇಶಪ್ಪ, ರಿಜಿಸ್ಟರ್ ಡಾ ಬಿ ಎಸ್ ಸುನಿಲ್ ಕುಮಾರ್, ಆಡಳಿತಾಧಿಕಾರಿ ವೈ ಯು ಸುಭಾಷ್ ಚಂದ್ರ ವಿದ್ಯಾರ್ಥಿನಿಯ ಮುಂದಿನ ಭವಿಷ್ಯಕ್ಕೆ ಶುಭ ಕೋರಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ ಸಂಜಯ್ ಪಾಂಡೆ ಎಂಬಿ, ಉತ್ತಮ ನಡತೆ ಮತ್ತು ಕೌಶಲ್ಯತೆಯನ್ನು ಹೊಂದಿದ್ದರೆ ಉನ್ನತ ಮಟ್ಟಕ್ಕೆ ಹೋಗಬಹುದೆಂಬುದಕ್ಕೆ ಒಂದು ಉತ್ತಮ ಉದಾಹರಣೆ ಎಂದು ತಿಳಿಸಿದ್ದಾರೆ. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ವೀರಪ್ಪ ಬಿ ಎನ್, ವಿಭಾಗದ ಎಲ್ಲಾ ಅಧ್ಯಾಪಕ ವರ್ಗದವರು ಕುಮಾರಿ ಷಷ್ಠಿ ಡಿಬಿ ಅವರ ಮುಂದಿನ ಭವಿಷ್ಯಕ್ಕೆ ಶುಭಕೋರಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *