Connect with us

Dvgsuddi Kannada | online news portal | Kannada news online

ದಾವಣಗೆರೆ; ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಗರಿಷ್ಠ 10 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

govt

ದಾವಣಗೆರೆ

ದಾವಣಗೆರೆ; ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಗರಿಷ್ಠ 10 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳಲ್ಲಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಈ ಕೆಳಕಂಡ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಾಯಕ ಕಿರಣ ಯೋಜನೆ : ಈ ಯೋಜನೆಯಡಿ ಸೌಲಭ್ಯ ಪಡೆಯಲು ವೃತ್ತಿ ಕಸುಬುದಾರರು ಹಾಗೂ ಕುಶಲಕರ್ಮಿಗಳಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 1.00 ಲಕ್ಷಗಳವರೆಗೆ ಆರ್ಥಿಕ ನೆರವು,
ಸ್ವ ಸಹಾಯ ಸಂಘಗಳಿಗೆ ಉತ್ತೇಜನ: ಈ ಯೋಜನೆಯಡಿ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಸಮುದಾಯದ ಸ್ವ ಸಹಾಯ ಗುಂಪುಗಳ ಗರಿಷ್ಠ 15 ಸದಸ್ಯರಿಗೆ ತಲಾ ರೂ.5,000/-ಗಳ ಸಹಾಯಧನ ಹಾಗೂ ರೂ. 10,000/-ಗಳ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ಪ್ರತಿ ಗುಂಪಿಗೆ ರೂ. 75,000/-ಗಳ ಸಹಾಯಧನ ಹಾಗೂ ರೂ. 1,50,000/-ಗಳ ಸಾಲ ಒಟ್ಟು ರೂ. 2,25,000/-ಗಳನ್ನು ನೀಡಲಾಗುವುದು.

ಬಸವ ಬೆಳಗು: ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷಗಳ ಮಿತಿಯಲ್ಲಿ ಗರಿಷ್ಟ ರೂ. 5.00 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.

ವಿದೇಶ ವಿದ್ಯಾವಿಕಾಸ: ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ. 3.50 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ. 10.00 ಲಕ್ಷಗಳನ್ನು ಶೇ.2 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಜೀವಜಲ ಯೋಜನೆ: ಈ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕನಿಷ್ಠ 2 ಎಕರೆ ಹಾಗೂ ಗರಿಷ್ಟ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ನಿಗದಿಪಡಿಸಿರುವ ಘಟಕ ವೆಚ್ಚ 2.00 ಲಕ್ಷ ಸಹಾಯಧನ ಹಾಗೂ 50,000/- ಸಾಲ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವುದು.
ಅರ್ಜಿಗಳನ್ನು ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿಗಳನ್ನು ದಿನಾಂಕ: 30.11.2022ರೊಳಗಾಗಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22865522 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿ ಸಂಖ್ಯೆ: 08192-230934 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top